ರಾಜ್ಯ

ಬ್ರದರ್ ಗಳ ಹಿನ್ನೆಲೆ ಜಗತ್ತಿಗೇ ಗೊತ್ತಿದೆ; ಡಿ.ಕೆ.ಸುರೇಶ್ ಗೆ ತಿರುಗೇಟು ಕೊಟ್ಟ ಎಚ್.ಡಿ ಕುಮಾರಸ್ವಾಮಿ

ನಾನು ಕರ್ನಾಟಕಕ್ಕೆ ಬರುವುದನ್ನೇ ಇವರಿಗೆ ಸಹಿಸಲಾಗಲ್ಲ, ನಾಗಮಂಗಲಕ್ಕೆ ಹೋದರೆ ಸಹಿಸುತ್ತಾರೆಯೇ?

ಮಾಗಡಿಯಲ್ಲಿ ಕೆಲಸ ಮಾಡದೆಯೇ ₹600 ಕೋಟಿ ಕಳ್ಳ ಬಿಲ್ ಮಾಡಿದ್ದು ಯಾರು?

ಬೆಂಗಳೂರು: ನಾಗಮಂಗಲ ಗಲಭೆ ಹಿಂದೆ ಕುಮಾರಸ್ವಾಮಿ ಇದ್ದಾರೆ ಎಂಬ ಡಿ.ಕೆ.ಸುರೇಶ್ ಆರೋಪಕ್ಕೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆ ಬ್ರದರ್ ಗಳ ಹಿನ್ನೆಲೆ ಏನು ಎಂಬುದು ಇಡೀ ಜಗತ್ತಿಗೇ ಗೊತ್ತಿದೆ ಎಂದರು.

ಬೆಂಗಳೂರಿನಲ್ಲಿ ಶನಿವಾರ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಡಿ.ಕೆ.ಸುರೇಶ್ ಅವರ ಹಿನ್ನಲೆ ಏನು ಅಂತ ಗೊತ್ತಿಲ್ಲವೇ? ಅವರ ಮಾರ್ಗ ಎಂಥದು ಎನ್ನುವುದು ಎಲ್ಲರಿಗೂ ಗೊತ್ತು ಎಂದು ಕಿಡಿಕಾರಿದರು.

ಅಣ್ಣ – ತಮ್ಮಂದಿರು ಯಾವ ಮಾರ್ಗದಲ್ಲಿ ಬಂದಿದ್ದಾರೆ. ಯಾರಿಗೆ ಹೇಗೆಲ್ಲಾ ಧಮ್ಕಿ ಹಾಕಿದ್ದಾರೆ. ಯಾರ ಯಾರ ಆಸ್ತಿಗಳನ್ನು ಲಪಟಾಯಿಸಿ ಲೂಟಿ ಮೂಡಿದ್ದಾರೆ, ಇದೆಲ್ಲವೂ ಜನರಿಗೆ ಗೊತ್ತಿದೆ. ಅಂತವರ ಬಗ್ಗೆ ನಾನು ಹೇಳಿಕೆ ಕೊಡಬೇಕಾ? ಎಂದು ಸಚಿವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ನಾನು ವಾರಕ್ಕೊಮ್ಮೆ ರಾಜ್ಯಕ್ಕೆ ಬರುವುದು ಗಲಾಟೆ ಮಾಡಿಸುವುದಕ್ಕಾ? ನಾನು ನಾಗಮಂಗಲಕ್ಕೆ ಹೋಗಿದ್ದು ಶಾಂತಿ ಉದ್ದೇಶಕ್ಕೆ. ಅಲ್ಲಿ ನಾನು ಏನು ಸಂದೇಶ ಕೊಟ್ಟಿದ್ದೀನಿ ಎಂಬುದನ್ನು ಆ ವ್ಯಕ್ತಿ ಒಮ್ಮೆ ಗಮನಿಸಲಿ ಎಂದು ಡಿ.ಕೆ.ಸುರೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಒಲೈಕೆ ರಾಜಕಾರಣಕ್ಕೆ ಮರುಳಾಗಬೇಡಿ ಎಂದು ಹೇಳಿದ್ದೇನೆ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಇದು ಕುವೆಂಪು ಅವರು ಕೊಟ್ಟ ಸಂದೇಶ. ಈ ಸರ್ವ ಜನಾಂಗದ ಶಾಂತಿಯ ತೋಟ ನೆಮ್ಮದಿಯಿಂದ ಇರಬೇಕು. ಎಲ್ಲರಿಗೂ ಕೈ ಮುಗಿದು ಮನವಿ ಮಾಡುತ್ತೇನೆ. ಎಲ್ಲಾ ಅಣ್ಣ ತಮ್ಮಂದಿರ ರೀತಿ ಬದುಕಬೇಕೆಂದು ನಾಗಮಂಗಲದಲ್ಲಿ ನಾಡಿನ ಜನತೆಗೆ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದರು.

ನಾಗಮಂಗಲದಲ್ಲಿ ನಾನೇನು ಬೆಂಕಿ ಹಚ್ಚೋದಕ್ಕೆ ಹೋಗಿದ್ನಾ? ಬೆಂಕಿ ಹಚ್ಚುವ ಸಂಸ್ಕೃತಿ ಅವದ್ದು ಎಂದು ಸಚಿವರು ಟೀಕಿಸಿದರು.

ಕರ್ನಾಟಕಕ್ಕೆ ಬಂದರೆ ಇವರು ಸಹಿಸಲ್ಲ!
ನಾನು ನಾಗಮಂಗಲಕ್ಕೆ ಹೋಗುವುದು ಇರಲಿ, ಕರ್ನಾಟಕಕ್ಕೆ ಬರುವುದನ್ನೇ ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಮತ್ತು ನಮ್ಮ ಪಕ್ಷದ ಕಥೆ ಮುಗಿದೇ ಹೋಯಿತು ಎಂದುಕೊಂಡಿದ್ದರು. ಈಗ ಕೇಂದ್ರದಲ್ಲಿ ಮಂತ್ರಿ ಆಗಿರುವುದಕ್ಕೆ ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ನೋವಿಗೆ ಔಷಧಿ ನಾನು ಎಲ್ಲಿಂದ ಕೊಡಲಿ? ಎಂದು ಕುಮಾರಸ್ವಾಮಿ ಟಾಂಗ್ ನೀಡಿದರು.

ಚನ್ನಪಟ್ಟಣ ಚುನಾವಣೆಗೂ ನಾಗಮಂಗಲಕ್ಕೂ ಏನು ಸಂಬಂಧ?
ಕುಮಾರಸ್ವಾಮಿಯವರು ಚನ್ನಪಟ್ಟಣ ಚುನಾವಣೆಗಾಗಿ ಬರುತ್ತಿದ್ದಾರೆ ಎಂದು ಟೀಕೆ ಮಾಡಿದರೆ ನಾನೇನು ಹೇಳಲಿ? ಚನ್ನಪಟ್ಟಣ ಚುನಾವಣೆಗೂ ನಾಗಮಂಗಲಕ್ಕೂ ಏನು ಸಂಬಂಧ? ಅಲ್ಲಿ ನಡೆದಿರುವ ಘಟನೆ ಬಗ್ಗೆ ಪರಿಶೀಲನೆ ಮಾಡಲು ಮಂಡ್ಯ ಸಂಸದನಾಗಿ ಅಲ್ಲಿಗೆ ಹೋಗಿದ್ದೇನೆ. ನಾನು ಹೋದಾಗ ಒಂದು ಸಮಾಜದವರನ್ನ ಒಲೈಸಿದ್ದೇನೆಯೇ? ಎರಡೂ ಸಮಾಜಗಳಲ್ಲಿ ಆಗಿರುವ ಅನಾಹುತವನ್ನು ಅರಿತುಕೊಂಡು ನನ್ನ ಕೈಲಾದಷ್ಟು ಪರಿಹಾರ ಕೊಟ್ಟು ಬಂದಿದ್ದೇನೆ ಎಂದರು.

ಇವರ ಸರ್ಟಿಫಿಕೇಟ್ ನನಗೆ ಬೇಕಿಲ್ಲ?
ಮಾಗಡಿ ಅಭಿವೃದ್ಧಿಗೆ ನನ್ನ ಕೊಡುಗೆ ಇಲ್ಲ ಎಂದು ಕೆಲವರು ಹೇಳಿಕೊಂಡು ತಿರುಗುತ್ತಿದ್ದಾರೆ. ಅಲ್ಲಿ ನಾನು ಏನೆಲ್ಲಾ ಕೆಲಸ ಮಾಡಿ ಅಭಿವೃದ್ಧಿ ಮಾಡಿದ್ದೇನೆ ಎನ್ನುವುದು ಜನತೆಗೆ ಗೊತ್ತಿದೆ. ಯಾರೋ ಒಬ್ಬರಿಂದ ನಾನು ಸರ್ಟಿಫಿಕೇಟ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಮಾಗಡಿ ಜನರೇ ನನಗೆ ಸರ್ಟಿಫಿಕೇಟ್ ಕೊಡುತ್ತಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

₹600 ಕೋಟಿ ಕಳ್ಳ ಬಿಲ್
ಮಾಗಡಿಯಲ್ಲಿ 2012-13ರಲ್ಲಿ ಸುಮಾರು ₹600 ಕೋಟಿ ಲಪಟಾಯಿಸಿದಾರೆ. ಕಳ್ಳ ಬಿಲ್ ಮಾಡಿ ದುಡ್ಡು ಲೂಟಿಯಾಗಿದೆ ಎಂದು ವಿಧಾನಸೌದದಲ್ಲಿ ಹೇಳಿದ್ದು ಯಾರು? ಸಿಎಂ ಅವರನ್ನು ಕರೆದುಕೊಂಡು ಹೋಗಿ ಭಾಷಣ ಮಾಡಿಸಿದ್ದಾರಲ್ಲವೇ? ಮಾಗಡಿಯಲ್ಲಿ ನಡೆದ ಅಕ್ರಮವನ್ನು ಯಾರು ಮುಚ್ಚಿ ಹಾಕಿದರು? ನಾಲಿಗೆ ಹರಿಯಬಿಡುವ ವ್ಯಕ್ತಿಗೆ ಇದು ಗೊತ್ತಿಲ್ಲವೇ? ಇವರಿಂದ ನಾನು ಪಾಠ ಕಲಿಬೇಕಾ? ಎಂದು ಸಚಿವರು ಕಿಡಿಕಾರಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

17 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago