ರಾಜ್ಯ

ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದೇ ಬರೆಸಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕರೆ

ಬೆಂಗಳೂರು: ಕಳೆದ 94 ವರ್ಷಗಳ ನಂತರ ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಜೊತೆಯಲ್ಲಿ ಜಾತಿಗಣತಿಯನ್ನು ನಡೆಸುತ್ತಿದ್ದು, ಒಕ್ಕಲಿಗ ಜನಾಂಗದವರು ಸಮೀಕ್ಷೆ ಸಂದರ್ಭದಲ್ಲಿ ಜಾತಿ, ಉಪಜಾತಿ ಹಾಗೂ ಸಮನಾಂತರ ಜಾತಿ ಕಾಲಂಗಳಲ್ಲಿ ಒಕ್ಕಲಿಗ ಎಂದೇ ಬರೆಸುವಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕರೆ ನೀಡಿದ್ದಾರೆ.

ಈ ಸಂಬಂಧ ಸಂದೇಶ ನೀಡಿರುವ ಅವರು, ಸೆಪ್ಟೆಂಬರ್.22ರಿಂದ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರತಿ ಜನಾಂಗದವರಿಗೂ ಈ ಸಮೀಕ್ಷೆ ನಮ್ಮ ನಮ್ಮ ಮಕ್ಕಳ ಮತ್ತು ಜನಾಂಗದ ಭವಿಷ್ಯದ ದೃಷ್ಟಿಯಿಂದ ಬಹು ಮುಖ್ಯವಾಗಿದೆ ಎಂದಿದ್ದಾರೆ.

60 ವಿವಿಧ ವಿಷಯಗಳೊಂದಿಗೆ ಗಣತಿದಾರರು ಮನೆಗಳಿಗೆ ಬಂದಾಗ ತಪ್ಪದೇ ಇದ್ದು, ಮಾಹಿತಿಯನ್ನು ನಿಖರವಾಗಿ, ವಸ್ತುನಿಷ್ಠವಾಗಿ, ವಿಚಾರಬದ್ಧವಾಗಿ ನೀಡಿ. ಧರ್ಮದ ಕಾಲಂ 8ರಲ್ಲಿ ಹಿಂದೂ ಎಂದೂ, ಜಾತಿ ಕಾಲಂ 9ರಲ್ಲಿ ಒಕ್ಕಲಿಗ ಎಂದೂ, ಕಾಲಂ 10ರಲ್ಲಿ ಉಪಜಾತಿಯನ್ನು ಒಕ್ಕಲಿಗ ಎಂದೇ ಬರೆಸಿ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:-ಮೈಸೂರು ದಸರಾ: ನಾಳೆ ಕಾಡಿನತ್ತ ದಸರಾ ಗಜಪಡೆ

ಒಕ್ಕಲಿಗ ಜನಾಂಗವನ್ನು ವ್ಯವಹಾರಿಕ ಭಾಷೆಯಲ್ಲಿ ಗೌಡ, ಗೌಡ ಎಂದು ಹೇಳುತ್ತೇವೆ. ಆದರೆ, ಸಮೀಕ್ಷೆ ಸಂದರ್ಭದಲ್ಲಿ ಎಲ್ಲಿಯೂ ಗೌಡ ಎಂಬುದನ್ನು ನಮೂದಿಸಬೇಡಿ, ಬರೆಸಬೇಡಿ. ನಮ ಉಪಜಾತಿಗಳು ಕುಟುಂಬದ ಸಾಂಸ್ಕೃತಿಕ ಆಚರಣೆಗೆ ಸೀಮಿತವಾಗಿರಬೇಕೇ ಹೊರತು, ದಾಖಲೆಯಲ್ಲಿ ಅಲ್ಲ. ನಾವೆಲ್ಲ ಒಂದೇ ಜಾತಿ ಅದು ಒಕ್ಕಲಿಗ ಕೋಡ್ ನಂಬರ್ 1541 ಎಂದು ಶ್ರೀಗಳು ಹೇಳಿದ್ದಾರೆ.

ಒಂದು ವೇಳೆ ಗಣತಿದಾರರು ಮನೆಗೆ ಬಂದಾಗ ನಾವು ಮನೆಯಲ್ಲಿ ಇಲ್ಲದಿದ್ದರೆ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವೆಬ್‍ಸೈಟ್‍ನಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಿ ಅಪ್‍ಲೋಡ್ ಮಾಡಬಹುದು. ಈ ಸಂದರ್ಭದಲ್ಲಿ ಏನೇ ಕೆಲಸವಿದ್ದರೂ 94 ವರ್ಷಗಳ ನಂತರ ನಡೆಯುವ ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸಿ ಸಹಕರಿಸಬೇಕು ಎಂದು ಸ್ವಾಮೀಜಿ ಅವರು ಕರೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

12 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

13 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

13 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

14 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

14 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

14 hours ago