ರಾಜ್ಯ

ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದೇ ಬರೆಸಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕರೆ

ಬೆಂಗಳೂರು: ಕಳೆದ 94 ವರ್ಷಗಳ ನಂತರ ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಜೊತೆಯಲ್ಲಿ ಜಾತಿಗಣತಿಯನ್ನು ನಡೆಸುತ್ತಿದ್ದು, ಒಕ್ಕಲಿಗ ಜನಾಂಗದವರು ಸಮೀಕ್ಷೆ ಸಂದರ್ಭದಲ್ಲಿ ಜಾತಿ, ಉಪಜಾತಿ ಹಾಗೂ ಸಮನಾಂತರ ಜಾತಿ ಕಾಲಂಗಳಲ್ಲಿ ಒಕ್ಕಲಿಗ ಎಂದೇ ಬರೆಸುವಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕರೆ ನೀಡಿದ್ದಾರೆ.

ಈ ಸಂಬಂಧ ಸಂದೇಶ ನೀಡಿರುವ ಅವರು, ಸೆಪ್ಟೆಂಬರ್.22ರಿಂದ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರತಿ ಜನಾಂಗದವರಿಗೂ ಈ ಸಮೀಕ್ಷೆ ನಮ್ಮ ನಮ್ಮ ಮಕ್ಕಳ ಮತ್ತು ಜನಾಂಗದ ಭವಿಷ್ಯದ ದೃಷ್ಟಿಯಿಂದ ಬಹು ಮುಖ್ಯವಾಗಿದೆ ಎಂದಿದ್ದಾರೆ.

60 ವಿವಿಧ ವಿಷಯಗಳೊಂದಿಗೆ ಗಣತಿದಾರರು ಮನೆಗಳಿಗೆ ಬಂದಾಗ ತಪ್ಪದೇ ಇದ್ದು, ಮಾಹಿತಿಯನ್ನು ನಿಖರವಾಗಿ, ವಸ್ತುನಿಷ್ಠವಾಗಿ, ವಿಚಾರಬದ್ಧವಾಗಿ ನೀಡಿ. ಧರ್ಮದ ಕಾಲಂ 8ರಲ್ಲಿ ಹಿಂದೂ ಎಂದೂ, ಜಾತಿ ಕಾಲಂ 9ರಲ್ಲಿ ಒಕ್ಕಲಿಗ ಎಂದೂ, ಕಾಲಂ 10ರಲ್ಲಿ ಉಪಜಾತಿಯನ್ನು ಒಕ್ಕಲಿಗ ಎಂದೇ ಬರೆಸಿ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:-ಮೈಸೂರು ದಸರಾ: ನಾಳೆ ಕಾಡಿನತ್ತ ದಸರಾ ಗಜಪಡೆ

ಒಕ್ಕಲಿಗ ಜನಾಂಗವನ್ನು ವ್ಯವಹಾರಿಕ ಭಾಷೆಯಲ್ಲಿ ಗೌಡ, ಗೌಡ ಎಂದು ಹೇಳುತ್ತೇವೆ. ಆದರೆ, ಸಮೀಕ್ಷೆ ಸಂದರ್ಭದಲ್ಲಿ ಎಲ್ಲಿಯೂ ಗೌಡ ಎಂಬುದನ್ನು ನಮೂದಿಸಬೇಡಿ, ಬರೆಸಬೇಡಿ. ನಮ ಉಪಜಾತಿಗಳು ಕುಟುಂಬದ ಸಾಂಸ್ಕೃತಿಕ ಆಚರಣೆಗೆ ಸೀಮಿತವಾಗಿರಬೇಕೇ ಹೊರತು, ದಾಖಲೆಯಲ್ಲಿ ಅಲ್ಲ. ನಾವೆಲ್ಲ ಒಂದೇ ಜಾತಿ ಅದು ಒಕ್ಕಲಿಗ ಕೋಡ್ ನಂಬರ್ 1541 ಎಂದು ಶ್ರೀಗಳು ಹೇಳಿದ್ದಾರೆ.

ಒಂದು ವೇಳೆ ಗಣತಿದಾರರು ಮನೆಗೆ ಬಂದಾಗ ನಾವು ಮನೆಯಲ್ಲಿ ಇಲ್ಲದಿದ್ದರೆ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವೆಬ್‍ಸೈಟ್‍ನಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಿ ಅಪ್‍ಲೋಡ್ ಮಾಡಬಹುದು. ಈ ಸಂದರ್ಭದಲ್ಲಿ ಏನೇ ಕೆಲಸವಿದ್ದರೂ 94 ವರ್ಷಗಳ ನಂತರ ನಡೆಯುವ ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸಿ ಸಹಕರಿಸಬೇಕು ಎಂದು ಸ್ವಾಮೀಜಿ ಅವರು ಕರೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

36 mins ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

1 hour ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

2 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

3 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

5 hours ago

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

7 hours ago