ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈದಿದ್ದ ಪಂಚಾಕ್ಷರಿ ಹಿರೇಮಠ ಅವರು ಮೂಲತಃ ಕೊಪ್ಪಳ ತಾಲ್ಲೂಕಿನ ಬಿಸರಳ್ಳಿ ಗ್ರಾಮದವರು.
ಧಾರವಾಡದಲ್ಲಿ ವಾಸವಾಗಿದ್ದ ಅವರು, ಅನಾರೋಗ್ಯದ ಹಿನ್ನೆಲೆಯಲ್ಲಿ ಅಲ್ಲೇ ವಿಧಿವಶರಾಗಿದ್ದಾರೆ. ಇಂದು ಸಂಜೆ ಬಿಸರಳ್ಳಿ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ಅಂತ್ಯಕ್ರಿಯೆ ನೆರವೇರಲಿದೆ.
ಇನನು ಪಂಚಾಕ್ಷರಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದು, ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ಅವರ ನಿಧನದ ಸುದ್ದಿ ತಿಳಿದು ದುಃಖವಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈಯ್ಯುವ ಜೊತೆಗೆ ಸಾಹಿತ್ಯ, ಪ್ರಬಂಧ, ವಿಮರ್ಶೆ, ಅನುವಾದ, ಕಾವ್ಯ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದವರು. ಪಂಚಾಕ್ಷರಿ ಅವರ ಅಗಲಿಕೆಯಿಂದ ನಾಡಿನ ಸಾರಸತ್ವ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…