ರಾಜ್ಯ

ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ: ಈಶ್ವರ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕೊಡಗು-ಮೈಸೂರು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಅವರನ್ನು ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಮಾತನಾಡಿದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದ್ದಾರೆ.

ಪ್ರಕೃತಿ, ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯಲ್ಲಿ ಕೋಟ್ಯಾಂತರ ರೂಪಾಯಿಯ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧವಾಗಿದ್ದು, ಅಂತವರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ.

ಈ ರೀತಿ ಅರಣ್ಯ ಸಂಪತ್ತನ್ನು ನಾಶಪಡಿಸಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು, ವೃಕ್ಷ ಸಂರಕ್ಷಣಾ ಕಾಯಿದೆಯಡಿ ಸರ್ಕಾರಿ ಜಾಗದಲ್ಲೇ ಆಗಲಿ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೇ ಅಕ್ರಮವಾಗಿ ಮರ ಕಡಿಯುವುದು ಅಪರಾಧವಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ನಾನು ಯಾರ ಹೆಸರೂ ಹೇಳಲು ಇಚ್ಛಿಸುವುದಿಲ್ಲ.

ಆದರೆ, ವಿಕ್ರಂ ಸಿಂಹ ಎಂಬುವವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ತಹಶೀಲ್ದಾರ್ ಅವರು ಪ್ರಕರಣ ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ಕ್ಷಿಪ್ರವಾಗಿ ಕ್ರಮ ವಹಿಸದ ಮತ್ತು ನಿಯಮಾನುಸಾರ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಎಸಗಿರುವ ಆರೋಪದಡಿ 5 ಅಧಿಕಾರಿ, ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಸಚಿವ ಈಶ್ವರ್​ ಖಂಡ್ರೆ ಹೇಳಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago