ರಾಜ್ಯ

ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ: ಈಶ್ವರ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕೊಡಗು-ಮೈಸೂರು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಅವರನ್ನು ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಮಾತನಾಡಿದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದ್ದಾರೆ.

ಪ್ರಕೃತಿ, ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯಲ್ಲಿ ಕೋಟ್ಯಾಂತರ ರೂಪಾಯಿಯ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧವಾಗಿದ್ದು, ಅಂತವರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ.

ಈ ರೀತಿ ಅರಣ್ಯ ಸಂಪತ್ತನ್ನು ನಾಶಪಡಿಸಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು, ವೃಕ್ಷ ಸಂರಕ್ಷಣಾ ಕಾಯಿದೆಯಡಿ ಸರ್ಕಾರಿ ಜಾಗದಲ್ಲೇ ಆಗಲಿ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೇ ಅಕ್ರಮವಾಗಿ ಮರ ಕಡಿಯುವುದು ಅಪರಾಧವಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ನಾನು ಯಾರ ಹೆಸರೂ ಹೇಳಲು ಇಚ್ಛಿಸುವುದಿಲ್ಲ.

ಆದರೆ, ವಿಕ್ರಂ ಸಿಂಹ ಎಂಬುವವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ತಹಶೀಲ್ದಾರ್ ಅವರು ಪ್ರಕರಣ ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ಕ್ಷಿಪ್ರವಾಗಿ ಕ್ರಮ ವಹಿಸದ ಮತ್ತು ನಿಯಮಾನುಸಾರ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಎಸಗಿರುವ ಆರೋಪದಡಿ 5 ಅಧಿಕಾರಿ, ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಸಚಿವ ಈಶ್ವರ್​ ಖಂಡ್ರೆ ಹೇಳಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago