ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.
ಕರ್ನಾಟಕ ಬಿಜೆಪಿ ಚಿತ್ರದುರ್ಗದಲ್ಲಿ ಯಡಿಯೂರಪ್ಪ ಉತ್ಸವ ಹೆಸರಿನಲ್ಲಿ ಬೃಹತ್ ಸಮಾವೇಶ ಮಾಡುವ ಮೂಲಕ ಅವರಿಗೆ ಅಭಿನಂದನೆ ಸಲ್ಲಿಸಲಿದೆ. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಈ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ.
82 ವರ್ಷದ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ ಅವರು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.
ಬಿ.ವೈ.ರಾಘವೇಂದ್ರ ಪೋಸ್ಟ್: ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂಸದ ರಾಘವೇಂದ್ರ ಅವರು ಭಾವುಕ ಪೋಸ್ಟ್ ಒಂದನ್ನು ಹಾಕಿದ್ದಾರೆ. ರೈತರು, ಬಡವರು ಹಾಗೂ ಸಮಾಜದ ಎಲ್ಲಾ ವರ್ಗಗಳ ಅಭಿವೃದ್ಧಿಗಾಗಿ ಅವರ ನಿರಂತರ ಸೇವೆ, ನಿಷ್ಠೆ ಮತ್ತು ದೂರದೃಷ್ಟಿಯ ನಾಯಕತ್ವ ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ. ಬಿಜೆಪಿ ಪಕ್ಷವು ಅವರ ನಾಐಕತ್ವದ ಮೇಲೆ ಅಪಾರ ಹೆಮ್ಮೆ ಹೊಂದಿದ್ದು, ಅವರು ಇನ್ನೂ ದೀರ್ಘಕಾಲ ಆರೋಗ್ಯ ಮತ್ತು ಶಕ್ತಿಯೊಂದಿಗೆ ದೇಶ ಮತ್ತು ರಾಜ್ಯಕ್ಕೆ ಮಾರ್ಗದರ್ಶನ ನೀಡಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…