Mysore
22
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಮೈಸೂರು ಕ್ಷೇತ್ರದಲ್ಲಿ ಪ್ರತಾಪ್‌ ಸಿಂಹಗಿಂತ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ: ರಾಧಾ ಮೋಹನ್‌ ದಾಸ್‌

ಮೈಸೂರು: ನಮಗೆ ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತಲೂ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ. ಯದುವಂಶ ಸೇವೆ ಇಡೀ ದೇಶಕ್ಕೆ ಗೊತ್ತಿದೆ. ಈಗ ಅವರು ಪ್ರಜಾಪ್ರಭುತ್ವದ ಭಾಗವಾಗಲು ಚುನಾವಣಾ ಕಣಕ್ಕೆ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ತಿಳಿಸಿದ್ದಾರೆ.

ಪ್ರತಾಪ್‌ಸಿಂಹಗೆ ಟಿಕೆಟ್‌ ತಪ್ಪಿದ್ದಕ್ಕೆ ನಿರ್ದಿಷ್ಟವಾದ ಕಾರಣ ಏನೂ ಇಲ್ಲ. ಮೈಸೂರು ಕ್ಷೇತ್ರದಲ್ಲಿ ಪ್ರತಾಪ್‌ ಸಿಂಹಗಿಂತ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಯದುವೀರ್ ನಮ್ಮ ಸ್ಟಾರ್ ಕ್ಯಾಂಪೇನರ್. ಅವರನ್ನು ಎಲ್ಲಾ ಕಡೆಗಳಲ್ಲಿ ಬಳಸಿಕೊಳ್ಳುತ್ತೇವೆ. ರಾಜವಂಶಸ್ಥ ಯದುವೀರ್‌ ಅವರಿಂಗಿತಲೂ ಉತ್ತಮ ಅಭ್ಯರ್ಥಿ ಬೇಕಾ ಎಂದು ಪ್ರಶ್ನೆ ಮಾಡಿದರು.

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದ್ದಕ್ಕೆ ನಿರ್ಧಿಷ್ಟವಾದ ಕಾರಣ ಅಂತ ಏನು ಇಲ್ಲ. ಪ್ರತಾಪ್ ಸಿಂಹ ಕೂಡ ನಮ್ಮ ಸ್ಟಾರ್ ಪ್ರಚಾರಕ ಅವರಿಗೆ ಸ್ಟಾರ್ ಪ್ರಚಾರಕ ಸ್ಥಾನವೇ ಕೊಟ್ಟಿದ್ದೇವೆ ಎಂದರು.

ಕೆ.ಎಸ್‌ ಈಶ್ವರಪ್ಪ ಬಂಡಾಯಕ್ಕೆ ಸಂಬಂಧಿಸಿದಂತೆ, ಅವರು ಬಿಜೆಪಿಯ ಹಿರಿಯ ನಾಯಕರಾಗಿದ್ದಾರೆ. ಕರ್ನಾಟಕದಲ್ಲಿ ಯಾವುದೇ ಬಂಡಾಯವಿಲ್ಲ. ನಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಶುರು ಮಾಡಿದ್ದಾರೆ ಅಷ್ಟೆ ಎಂದರು.

ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ನಮ್ಮ ಪಕ್ಷದ ಬೆಂಬಲಿಗರು ಮತ್ತು ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ ಎಂದು ಹೇಳಿದರು.

Tags:
error: Content is protected !!