ದಾವಣಗೆರೆ: ಇಲ್ಲಿನ ಬಿಜೆಪಿ ಲೋಕಸಭಾ ಆಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಮಾಡಲು ದಾವಣಗೆರೆಗೆ ಆಗಮಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ನದತ್ತ ಚಾಮರಾಜ ಒಡೆಯರ್ ಅವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾತನಾಡಿದ್ದಾರೆ.
ಇಲ್ಲಿನ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮೂರನೇ ಅವಧಿಗೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಜನರು ಸಂಕಲ್ಪ ಮಾಡಿದ್ದಾರೆ. ಪ್ರಧಾನಿ ಮೋದಿ ಅವರ ಅವಧಿಯಲ್ಲಿ ದೇಶದ ಆರ್ಥಿಕ ಸ್ಥಿತಿಗತಿಯಲ್ಲಿ ಮಹತ್ತರ ಬದಲಾವಣೆಗಳಾಗಿದೆ. ಮೋದಿ ತಮ್ಮ ಕಾರ್ಯಕ್ಷಮತೆಯಿಂದಾಗಿ ವಿಶ್ವನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದರು.
ಎನ್ಡಿಎ ಅವಧಿಯಲ್ಲಿ ದೇಶದ ಅಭಿವೃದ್ಧಿಯಾಗಿಲ್ಲ ಎಂಬ ಕಾಂಗ್ರೆಸ್ ಹೇಳಿಕೆಗೆ, ಕಳೆದ ಹತ್ತು ವರ್ಷಗಳ ಮೋದಿ ಅವರ ಅವಧಿಯಲ್ಲಿ ದೇಶ ಅಭಿವೃದ್ಧಿ ಹೊಂದಿರುವುದು ನಮ್ಮ ಕಣ್ಣಮುಂದೆಯಿದೆ. ಮೋದಿ ಅವರ ಪ್ರಗತಿಪರ ಸಾಧನೆಗಳ ಬಲದಿಂದಲೇ ನಾವೆಲ್ಲಾ ಈ ಬಾರಿಯ ಚುನಾವಣೆಯಲ್ಲಿ ಗೆಲುವು ದಾಖಲಿಸಲಿದ್ದೇವೆ. ಇನ್ನು ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆದಿರುವ ಚುನಾವಣೆಯಲ್ಲಿ ಎಲ್ಲಾ 14 ಕ್ಷೇತ್ರಗಳಲ್ಲಿ ಬಿಜೆಪಿಯೇ ವಿಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಹಾಸನದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ವಿಚಾರದ ಬಗ್ಗೆ ಈಗಾಗಲೇ ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಸರ್ಕಾರವೂ ಸಹಾ ತನ್ನ ನಿಲುವನ್ನು ಪ್ರಕಟಿಸಿದೆ. ಈ ವಿಷಯದ ತನಿಖೆ ಪೂರ್ಣಗೊಂಡ ಬಳಿಕ ಪ್ರತಿಕ್ರಿಯೆ ನೀಡಲಾಗುವುದು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…