ಬೆಂಗಳೂರು: ಅರವಿಂದ್ ಕೇಜ್ರಿವಾಲ್ ಅವರು ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯಮುನಾ ನದಿಯ ಮೇಲೆ ಕಳಂಕ ತಂದಿದ್ದರು. ಅದೇ ಕಳಂಕವೇ ಇಂದಿನ ಚುನಾವಣೆಯ ಎಎಪಿ ಸೋಲಿಗೆ ಕಾರಣವಾಗಿದೆ ಎಂದು ಆರ್.ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಾವಿರಾರು ಇತಿಹಾಸ ಹೊಂದಿರುವ ಯುಮನಾ ನದಿಯೂ ಒಂದು ದಿನಾನು ಮಲಿನವಾಗಿಲ್ಲ. ಆದರೆ ಕೇಜ್ರಿವಾಲ್ರವರು ಪ್ರತಿನಿತ್ಯ ಸಾರ್ವಜನಿಕರು ಕುಡಿಯುತ್ತಿದ್ದ ಹಾಗೂ ಗಂಗೆ ಎಂದು ಪೂಜೆ ಮಾಡುತ್ತಿದ್ದ ನೀರಿನ ಮೇಲೆಯೇ ಕಳಂಕ ತಂದು ಬಿಟ್ಟರು. ಸ್ವಚ್ಛತೆ ಮಾಡುವ ಕೆಲಸ ನದಿಯದ್ದಲ್ಲ, ಕೇಜ್ರಿವಾಲ್ ಸರಿಯಾಗಿ ನಿರ್ವಹಣೆ ಮಾಡದೇ ನದಿ ಮೇಲೆ ಆಪಾದನೆ ಮಾಡಿದ್ದರು. ಅದೇ ಅವರ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದರು.
ಅರವಿಂದ್ ಕೇಜ್ರಿವಾಲ್ ಅವರು ಜೈಲಿನಲ್ಲಿದ್ದುಕೊಂಡು ಎರಡು ತಿಂಗಳು ಆಡಳಿತ ಸ್ಥಗಿತಗೊಳಿಸಿದರು. ಎಎಪಿ ಪಕ್ಷದವರಿಗೆ ಯಮುನಾ ನದಿಯ ಶಾಪ ತಟ್ಟಿದೆ. ಇನ್ನೂ ಎಎಪಿ ಪಕ್ಷದವರು ಕಾರು, ಮಫ್ಲರ್, ನಿಮಿಷ ನಿಮಿಷಕ್ಕೂ ಕೆಮ್ಮೋದು, ಎರಡು ಬೆಡ್ರೂಮ್ ಫ್ಲಾಟ್, ಅಲ್ಲದೇ ಈಗ ಶೀಷ್ ಮಹಲ್ನಲ್ಲಿ 25 ರೂಮ್ ಹಾಗೂ ಎಸ್ಕಾರ್ಟ್ ಹೀಗೆ ರಾಜನ ರೀತಿಯ ಆಡಳಿತವನ್ನು ನೋಡಿ ಸಾರ್ವಜನಿಕರು ಬೇಸತ್ತಿದ್ದರು. ಹೀಗಾಗಿ ಬಿಜೆಪಿಗೆ ಗೆಲುವಾಗಿದೆ ಎಂದು ಹೇಳಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…