ರಾಜ್ಯ

ಎಎಪಿಗೆ ಸೋಲಿಗೆ ಯಮುನಾ ನದಿಯ ಕಳಂಕವೇ ಕಾರಣ: ಆರ್‌.ಅಶೋಕ್‌

ಬೆಂಗಳೂರು: ಅರವಿಂದ್‌ ಕೇಜ್ರಿವಾಲ್‌ ಅವರು ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯಮುನಾ ನದಿಯ ಮೇಲೆ ಕಳಂಕ ತಂದಿದ್ದರು. ಅದೇ ಕಳಂಕವೇ ಇಂದಿನ ಚುನಾವಣೆಯ ಎಎಪಿ ಸೋಲಿಗೆ ಕಾರಣವಾಗಿದೆ ಎಂದು ಆರ್‌.ಅಶೋಕ್‌ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಾವಿರಾರು ಇತಿಹಾಸ ಹೊಂದಿರುವ ಯುಮನಾ ನದಿಯೂ ಒಂದು ದಿನಾನು ಮಲಿನವಾಗಿಲ್ಲ. ಆದರೆ ಕೇಜ್ರಿವಾಲ್‌ರವರು ಪ್ರತಿನಿತ್ಯ ಸಾರ್ವಜನಿಕರು ಕುಡಿಯುತ್ತಿದ್ದ ಹಾಗೂ ಗಂಗೆ ಎಂದು ಪೂಜೆ ಮಾಡುತ್ತಿದ್ದ ನೀರಿನ ಮೇಲೆಯೇ ಕಳಂಕ ತಂದು ಬಿಟ್ಟರು. ಸ್ವಚ್ಛತೆ ಮಾಡುವ ಕೆಲಸ ನದಿಯದ್ದಲ್ಲ, ಕೇಜ್ರಿವಾಲ್‌ ಸರಿಯಾಗಿ ನಿರ್ವಹಣೆ ಮಾಡದೇ ನದಿ ಮೇಲೆ ಆಪಾದನೆ ಮಾಡಿದ್ದರು. ಅದೇ ಅವರ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದರು.

ಅರವಿಂದ್‌ ಕೇಜ್ರಿವಾಲ್‌ ಅವರು ಜೈಲಿನಲ್ಲಿದ್ದುಕೊಂಡು ಎರಡು ತಿಂಗಳು ಆಡಳಿತ ಸ್ಥಗಿತಗೊಳಿಸಿದರು. ಎಎಪಿ ಪಕ್ಷದವರಿಗೆ ಯಮುನಾ ನದಿಯ ಶಾಪ ತಟ್ಟಿದೆ. ಇನ್ನೂ ಎಎಪಿ ಪಕ್ಷದವರು ಕಾರು, ಮಫ್ಲರ್‌, ನಿಮಿಷ ನಿಮಿಷಕ್ಕೂ ಕೆಮ್ಮೋದು, ಎರಡು ಬೆಡ್‌ರೂಮ್‌ ಫ್ಲಾಟ್‌, ಅಲ್ಲದೇ ಈಗ ಶೀಷ್‌ ಮಹಲ್‌ನಲ್ಲಿ 25 ರೂಮ್‌ ಹಾಗೂ ಎಸ್ಕಾರ್ಟ್‌ ಹೀಗೆ ರಾಜನ ರೀತಿಯ ಆಡಳಿತವನ್ನು ನೋಡಿ ಸಾರ್ವಜನಿಕರು ಬೇಸತ್ತಿದ್ದರು. ಹೀಗಾಗಿ ಬಿಜೆಪಿಗೆ ಗೆಲುವಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago