ರಾಜ್ಯ

ಎಎಪಿಗೆ ಸೋಲಿಗೆ ಯಮುನಾ ನದಿಯ ಕಳಂಕವೇ ಕಾರಣ: ಆರ್‌.ಅಶೋಕ್‌

ಬೆಂಗಳೂರು: ಅರವಿಂದ್‌ ಕೇಜ್ರಿವಾಲ್‌ ಅವರು ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯಮುನಾ ನದಿಯ ಮೇಲೆ ಕಳಂಕ ತಂದಿದ್ದರು. ಅದೇ ಕಳಂಕವೇ ಇಂದಿನ ಚುನಾವಣೆಯ ಎಎಪಿ ಸೋಲಿಗೆ ಕಾರಣವಾಗಿದೆ ಎಂದು ಆರ್‌.ಅಶೋಕ್‌ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಾವಿರಾರು ಇತಿಹಾಸ ಹೊಂದಿರುವ ಯುಮನಾ ನದಿಯೂ ಒಂದು ದಿನಾನು ಮಲಿನವಾಗಿಲ್ಲ. ಆದರೆ ಕೇಜ್ರಿವಾಲ್‌ರವರು ಪ್ರತಿನಿತ್ಯ ಸಾರ್ವಜನಿಕರು ಕುಡಿಯುತ್ತಿದ್ದ ಹಾಗೂ ಗಂಗೆ ಎಂದು ಪೂಜೆ ಮಾಡುತ್ತಿದ್ದ ನೀರಿನ ಮೇಲೆಯೇ ಕಳಂಕ ತಂದು ಬಿಟ್ಟರು. ಸ್ವಚ್ಛತೆ ಮಾಡುವ ಕೆಲಸ ನದಿಯದ್ದಲ್ಲ, ಕೇಜ್ರಿವಾಲ್‌ ಸರಿಯಾಗಿ ನಿರ್ವಹಣೆ ಮಾಡದೇ ನದಿ ಮೇಲೆ ಆಪಾದನೆ ಮಾಡಿದ್ದರು. ಅದೇ ಅವರ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದರು.

ಅರವಿಂದ್‌ ಕೇಜ್ರಿವಾಲ್‌ ಅವರು ಜೈಲಿನಲ್ಲಿದ್ದುಕೊಂಡು ಎರಡು ತಿಂಗಳು ಆಡಳಿತ ಸ್ಥಗಿತಗೊಳಿಸಿದರು. ಎಎಪಿ ಪಕ್ಷದವರಿಗೆ ಯಮುನಾ ನದಿಯ ಶಾಪ ತಟ್ಟಿದೆ. ಇನ್ನೂ ಎಎಪಿ ಪಕ್ಷದವರು ಕಾರು, ಮಫ್ಲರ್‌, ನಿಮಿಷ ನಿಮಿಷಕ್ಕೂ ಕೆಮ್ಮೋದು, ಎರಡು ಬೆಡ್‌ರೂಮ್‌ ಫ್ಲಾಟ್‌, ಅಲ್ಲದೇ ಈಗ ಶೀಷ್‌ ಮಹಲ್‌ನಲ್ಲಿ 25 ರೂಮ್‌ ಹಾಗೂ ಎಸ್ಕಾರ್ಟ್‌ ಹೀಗೆ ರಾಜನ ರೀತಿಯ ಆಡಳಿತವನ್ನು ನೋಡಿ ಸಾರ್ವಜನಿಕರು ಬೇಸತ್ತಿದ್ದರು. ಹೀಗಾಗಿ ಬಿಜೆಪಿಗೆ ಗೆಲುವಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

4 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

4 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

4 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago