ಬೆಂಗಳೂರು: ಅರವಿಂದ್ ಕೇಜ್ರಿವಾಲ್ ಅವರು ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯಮುನಾ ನದಿಯ ಮೇಲೆ ಕಳಂಕ ತಂದಿದ್ದರು. ಅದೇ ಕಳಂಕವೇ ಇಂದಿನ ಚುನಾವಣೆಯ ಎಎಪಿ ಸೋಲಿಗೆ ಕಾರಣವಾಗಿದೆ ಎಂದು ಆರ್.ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಾವಿರಾರು ಇತಿಹಾಸ ಹೊಂದಿರುವ ಯುಮನಾ ನದಿಯೂ ಒಂದು ದಿನಾನು ಮಲಿನವಾಗಿಲ್ಲ. ಆದರೆ ಕೇಜ್ರಿವಾಲ್ರವರು ಪ್ರತಿನಿತ್ಯ ಸಾರ್ವಜನಿಕರು ಕುಡಿಯುತ್ತಿದ್ದ ಹಾಗೂ ಗಂಗೆ ಎಂದು ಪೂಜೆ ಮಾಡುತ್ತಿದ್ದ ನೀರಿನ ಮೇಲೆಯೇ ಕಳಂಕ ತಂದು ಬಿಟ್ಟರು. ಸ್ವಚ್ಛತೆ ಮಾಡುವ ಕೆಲಸ ನದಿಯದ್ದಲ್ಲ, ಕೇಜ್ರಿವಾಲ್ ಸರಿಯಾಗಿ ನಿರ್ವಹಣೆ ಮಾಡದೇ ನದಿ ಮೇಲೆ ಆಪಾದನೆ ಮಾಡಿದ್ದರು. ಅದೇ ಅವರ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದರು.
ಅರವಿಂದ್ ಕೇಜ್ರಿವಾಲ್ ಅವರು ಜೈಲಿನಲ್ಲಿದ್ದುಕೊಂಡು ಎರಡು ತಿಂಗಳು ಆಡಳಿತ ಸ್ಥಗಿತಗೊಳಿಸಿದರು. ಎಎಪಿ ಪಕ್ಷದವರಿಗೆ ಯಮುನಾ ನದಿಯ ಶಾಪ ತಟ್ಟಿದೆ. ಇನ್ನೂ ಎಎಪಿ ಪಕ್ಷದವರು ಕಾರು, ಮಫ್ಲರ್, ನಿಮಿಷ ನಿಮಿಷಕ್ಕೂ ಕೆಮ್ಮೋದು, ಎರಡು ಬೆಡ್ರೂಮ್ ಫ್ಲಾಟ್, ಅಲ್ಲದೇ ಈಗ ಶೀಷ್ ಮಹಲ್ನಲ್ಲಿ 25 ರೂಮ್ ಹಾಗೂ ಎಸ್ಕಾರ್ಟ್ ಹೀಗೆ ರಾಜನ ರೀತಿಯ ಆಡಳಿತವನ್ನು ನೋಡಿ ಸಾರ್ವಜನಿಕರು ಬೇಸತ್ತಿದ್ದರು. ಹೀಗಾಗಿ ಬಿಜೆಪಿಗೆ ಗೆಲುವಾಗಿದೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…