ಬೆಂಗಳೂರು: ಇದೇ ಜೂನ್ 13ರಂದು ನಡೆಯಲಿರುವ ವಿಧಾನ ಪರಿಷತ್ ಆಯ್ಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಆಯ್ಕೆಯಾಗುವುದು ಖಚಿತ ಎಂದು ವರದಿಯಾಗಿದೆ.
ಯತೀಂದ್ರ ಅವರ ಉಮೇದುವಾರಿಕೆಯನ್ನು ಗುರುವಾರ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ಮ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷ ಅನುಮೋದಿಸಿದೆ.
ಉಳಿದ 6 ಕ್ಷೇತ್ರಗಳಿಗೆ ಪೈಪೋಟಿ ಹೆಚ್ಚಾಗಿದೆ. ಈ ಸ್ಥಾನಗಳಲ್ಲಿ ಮೈಸೂರು ಭಾಗದ ಪುಷ್ಪ ಅಮರನಾಥ್ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಈ ಪಟ್ಟಿಯನ್ನು ಸಿಎಂ ಮತ್ತು ಡಿಸಿಎಂ ಅವರು ಸಿದ್ದಪಡಿಸಿದ್ದು, ಇಂದು ಅಥವಾ ನಾಳೆ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಈ ಬಾರಿ 7 ಸ್ಥಾನಗಳಿಗೆ 65 ಮಂದಿ ಆಕಾಂಕ್ಷಿಗಳ ಶಾರ್ಟ್ ಲಿಸ್ಟ್ ಪಟ್ಟಿ ಸಿದ್ದಪಡಿಸಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟ ಯತೀಂದ್ರಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಹೇಳಿತ್ತು. ಅದರಂತೆ ಯತೀಂದ್ರ ಅವರಿಗೆ ಟಿಕೆಟ್ ಪಟ್ಟ ಎನ್ನಲಾಗಿದೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…