ಬೆಂಗಳೂರು: ಇದೇ ಜೂನ್ 13ರಂದು ನಡೆಯಲಿರುವ ವಿಧಾನ ಪರಿಷತ್ ಆಯ್ಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಆಯ್ಕೆಯಾಗುವುದು ಖಚಿತ ಎಂದು ವರದಿಯಾಗಿದೆ.
ಯತೀಂದ್ರ ಅವರ ಉಮೇದುವಾರಿಕೆಯನ್ನು ಗುರುವಾರ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ಮ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷ ಅನುಮೋದಿಸಿದೆ.
ಉಳಿದ 6 ಕ್ಷೇತ್ರಗಳಿಗೆ ಪೈಪೋಟಿ ಹೆಚ್ಚಾಗಿದೆ. ಈ ಸ್ಥಾನಗಳಲ್ಲಿ ಮೈಸೂರು ಭಾಗದ ಪುಷ್ಪ ಅಮರನಾಥ್ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಈ ಪಟ್ಟಿಯನ್ನು ಸಿಎಂ ಮತ್ತು ಡಿಸಿಎಂ ಅವರು ಸಿದ್ದಪಡಿಸಿದ್ದು, ಇಂದು ಅಥವಾ ನಾಳೆ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಈ ಬಾರಿ 7 ಸ್ಥಾನಗಳಿಗೆ 65 ಮಂದಿ ಆಕಾಂಕ್ಷಿಗಳ ಶಾರ್ಟ್ ಲಿಸ್ಟ್ ಪಟ್ಟಿ ಸಿದ್ದಪಡಿಸಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟ ಯತೀಂದ್ರಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಹೇಳಿತ್ತು. ಅದರಂತೆ ಯತೀಂದ್ರ ಅವರಿಗೆ ಟಿಕೆಟ್ ಪಟ್ಟ ಎನ್ನಲಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…