ರಾಜ್ಯ

ಮೈಸೂರಿನಲ್ಲಿ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ನೀಡುತ್ತಿಲ್ಲ, ಬದಲಿಗೆ ಅಕ್ರಮ ನಡೆಯುತ್ತಿವೆ: ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಬಗರ್‌ ಹುಕುಂ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಖಾತೆ ನೀಡುತ್ತಿಲ್ಲ. ಬದಲಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುವ ಕೆಲಸ ಸೇರಿದಂತೆ ಅಕ್ರಮಗಳು ನಡೆಯುತ್ತಿವೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್‌ನಲ್ಲಿ ಇಂದು(ಮಾರ್ಚ್.19) ಪ್ರಶ್ನೋತ್ತರ ಕಲಾಪದಲ್ಲಿ ಪ್ರಶ್ನೆ ಕೇಳಿದ ಅವರು, ನಮ್ಮ ಕ್ಷೇತ್ರದಲ್ಲಿ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಖಾತೆ ಮಾಡಿಕೊಡುತ್ತಿಲ್ಲ. ಅರ್ಜಿದಾರರು ಅರ್ಜಿ ಹಾಕಿ, ಶುಲ್ಕ ಪಾವತಿಸಿದ ಮೇಲೆಯೂ ಖಾತೆ ನೀಡುತ್ತಿಲ್ಲ. ಬದಲಿಗೆ ಆ ಕಚೇರಿಗಳಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ಕೇಳಿ ಬರುತ್ತಿವೆ ಎಂದರು.

ಸುಮಾರು 30-35 ವರ್ಷಗಳಿಂದ ಖಾತೆ ಆಗಿಲ್ಲ. ಸಾಗುವಳಿ ಚೀಟಿ ನೀಡಿದವರಿಗೆ ತಕ್ಷಣ ಖಾತೆ ಮಾಡಿಕೊಡಬೇಕು. ಆದರೆ ಇಲ್ಲಿ ಖಾತೆ ಮಾಡಿಸಲು ಲಂಚ ಕೇಳುವ ಅಧಿಕಾರಿಗಳಿಗೆ ಲಂಚ ನೀಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಖಾತೆ ಮಾಡಿಕೊಡುವುದಕ್ಕೆ ಒಂದು ಕಾಲ ಮಿತಿಯನ್ನು ಮಾಡಬೇಕು ಎಂದು ಹೇಳಿದರು.

ಈ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಸಾಗುವಳಿ ಚೀಟಿ ನೀಡಿದವರಿಗೆ ಇನ್ನೂ ಖಾತೆ ನೀಡದಿರವುದು ಸತ್ಯ. ಕಳೆದ 20-30 ವರ್ಷಗಳಿಂದ ಸಾಗುವಳಿ ಚೀಟಿ ದ್ದರೂ ಖಾತೆ ಮಾಡಿಕೊಡಲು ಆಗಿಲ್ಲ. ನೈಜವಾಗಿ ಇರುವ ಕೇಸಲ್ಲಿ ಆದಷ್ಟು ಬೇಗ ಖಾತೆ ಮಾಡಿಕೊಡುತ್ತೇವೆ. ಅಧಿಕಾರಿಗಳಿಗೂ ಖಾತೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಇನ್ನು ಹಲವು ಪ್ರಕರಣಗಳಲ್ಲಿ ಅಕ್ರಮವಾಗಿ ಭೂಮಿ ಹಂಚಿಕೆಯಾಗಿದೆ. ಅರಣ್ಯ ಭಾಗದಲ್ಲಿ ಹಂಚಿಕೆ ಆಗಿರುವುದಕ್ಕೆ ದಾಖಲಾತಿ ಮಾಡಿಕೊಡಲು ಆಗುವುದಿಲ್ಲ. ಅದನ್ನು ಪರಿಶೀಲಿಸಿದ ನಂತರ ನೈಜವಾಗಿ ಹಂಚಿಕೆ ಆಗಿರುವವರಿಗೆ ಆದಷ್ಟು ಬೇಗ ಖಾತೆ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.

ಅರ್ಚನ ಎಸ್‌ ಎಸ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

59 mins ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

3 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

4 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

4 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

4 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

4 hours ago