ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಖಾತೆ ನೀಡುತ್ತಿಲ್ಲ. ಬದಲಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುವ ಕೆಲಸ ಸೇರಿದಂತೆ ಅಕ್ರಮಗಳು ನಡೆಯುತ್ತಿವೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ನಲ್ಲಿ ಇಂದು(ಮಾರ್ಚ್.19) ಪ್ರಶ್ನೋತ್ತರ ಕಲಾಪದಲ್ಲಿ ಪ್ರಶ್ನೆ ಕೇಳಿದ ಅವರು, ನಮ್ಮ ಕ್ಷೇತ್ರದಲ್ಲಿ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಖಾತೆ ಮಾಡಿಕೊಡುತ್ತಿಲ್ಲ. ಅರ್ಜಿದಾರರು ಅರ್ಜಿ ಹಾಕಿ, ಶುಲ್ಕ ಪಾವತಿಸಿದ ಮೇಲೆಯೂ ಖಾತೆ ನೀಡುತ್ತಿಲ್ಲ. ಬದಲಿಗೆ ಆ ಕಚೇರಿಗಳಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ಕೇಳಿ ಬರುತ್ತಿವೆ ಎಂದರು.
ಸುಮಾರು 30-35 ವರ್ಷಗಳಿಂದ ಖಾತೆ ಆಗಿಲ್ಲ. ಸಾಗುವಳಿ ಚೀಟಿ ನೀಡಿದವರಿಗೆ ತಕ್ಷಣ ಖಾತೆ ಮಾಡಿಕೊಡಬೇಕು. ಆದರೆ ಇಲ್ಲಿ ಖಾತೆ ಮಾಡಿಸಲು ಲಂಚ ಕೇಳುವ ಅಧಿಕಾರಿಗಳಿಗೆ ಲಂಚ ನೀಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಖಾತೆ ಮಾಡಿಕೊಡುವುದಕ್ಕೆ ಒಂದು ಕಾಲ ಮಿತಿಯನ್ನು ಮಾಡಬೇಕು ಎಂದು ಹೇಳಿದರು.
ಈ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಸಾಗುವಳಿ ಚೀಟಿ ನೀಡಿದವರಿಗೆ ಇನ್ನೂ ಖಾತೆ ನೀಡದಿರವುದು ಸತ್ಯ. ಕಳೆದ 20-30 ವರ್ಷಗಳಿಂದ ಸಾಗುವಳಿ ಚೀಟಿ ದ್ದರೂ ಖಾತೆ ಮಾಡಿಕೊಡಲು ಆಗಿಲ್ಲ. ನೈಜವಾಗಿ ಇರುವ ಕೇಸಲ್ಲಿ ಆದಷ್ಟು ಬೇಗ ಖಾತೆ ಮಾಡಿಕೊಡುತ್ತೇವೆ. ಅಧಿಕಾರಿಗಳಿಗೂ ಖಾತೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇನ್ನು ಹಲವು ಪ್ರಕರಣಗಳಲ್ಲಿ ಅಕ್ರಮವಾಗಿ ಭೂಮಿ ಹಂಚಿಕೆಯಾಗಿದೆ. ಅರಣ್ಯ ಭಾಗದಲ್ಲಿ ಹಂಚಿಕೆ ಆಗಿರುವುದಕ್ಕೆ ದಾಖಲಾತಿ ಮಾಡಿಕೊಡಲು ಆಗುವುದಿಲ್ಲ. ಅದನ್ನು ಪರಿಶೀಲಿಸಿದ ನಂತರ ನೈಜವಾಗಿ ಹಂಚಿಕೆ ಆಗಿರುವವರಿಗೆ ಆದಷ್ಟು ಬೇಗ ಖಾತೆ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…