ರಾಜ್ಯ

ಮೈಸೂರಿನಲ್ಲಿ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ನೀಡುತ್ತಿಲ್ಲ, ಬದಲಿಗೆ ಅಕ್ರಮ ನಡೆಯುತ್ತಿವೆ: ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಬಗರ್‌ ಹುಕುಂ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಖಾತೆ ನೀಡುತ್ತಿಲ್ಲ. ಬದಲಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುವ ಕೆಲಸ ಸೇರಿದಂತೆ ಅಕ್ರಮಗಳು ನಡೆಯುತ್ತಿವೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್‌ನಲ್ಲಿ ಇಂದು(ಮಾರ್ಚ್.19) ಪ್ರಶ್ನೋತ್ತರ ಕಲಾಪದಲ್ಲಿ ಪ್ರಶ್ನೆ ಕೇಳಿದ ಅವರು, ನಮ್ಮ ಕ್ಷೇತ್ರದಲ್ಲಿ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಖಾತೆ ಮಾಡಿಕೊಡುತ್ತಿಲ್ಲ. ಅರ್ಜಿದಾರರು ಅರ್ಜಿ ಹಾಕಿ, ಶುಲ್ಕ ಪಾವತಿಸಿದ ಮೇಲೆಯೂ ಖಾತೆ ನೀಡುತ್ತಿಲ್ಲ. ಬದಲಿಗೆ ಆ ಕಚೇರಿಗಳಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ಕೇಳಿ ಬರುತ್ತಿವೆ ಎಂದರು.

ಸುಮಾರು 30-35 ವರ್ಷಗಳಿಂದ ಖಾತೆ ಆಗಿಲ್ಲ. ಸಾಗುವಳಿ ಚೀಟಿ ನೀಡಿದವರಿಗೆ ತಕ್ಷಣ ಖಾತೆ ಮಾಡಿಕೊಡಬೇಕು. ಆದರೆ ಇಲ್ಲಿ ಖಾತೆ ಮಾಡಿಸಲು ಲಂಚ ಕೇಳುವ ಅಧಿಕಾರಿಗಳಿಗೆ ಲಂಚ ನೀಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಖಾತೆ ಮಾಡಿಕೊಡುವುದಕ್ಕೆ ಒಂದು ಕಾಲ ಮಿತಿಯನ್ನು ಮಾಡಬೇಕು ಎಂದು ಹೇಳಿದರು.

ಈ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಸಾಗುವಳಿ ಚೀಟಿ ನೀಡಿದವರಿಗೆ ಇನ್ನೂ ಖಾತೆ ನೀಡದಿರವುದು ಸತ್ಯ. ಕಳೆದ 20-30 ವರ್ಷಗಳಿಂದ ಸಾಗುವಳಿ ಚೀಟಿ ದ್ದರೂ ಖಾತೆ ಮಾಡಿಕೊಡಲು ಆಗಿಲ್ಲ. ನೈಜವಾಗಿ ಇರುವ ಕೇಸಲ್ಲಿ ಆದಷ್ಟು ಬೇಗ ಖಾತೆ ಮಾಡಿಕೊಡುತ್ತೇವೆ. ಅಧಿಕಾರಿಗಳಿಗೂ ಖಾತೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಇನ್ನು ಹಲವು ಪ್ರಕರಣಗಳಲ್ಲಿ ಅಕ್ರಮವಾಗಿ ಭೂಮಿ ಹಂಚಿಕೆಯಾಗಿದೆ. ಅರಣ್ಯ ಭಾಗದಲ್ಲಿ ಹಂಚಿಕೆ ಆಗಿರುವುದಕ್ಕೆ ದಾಖಲಾತಿ ಮಾಡಿಕೊಡಲು ಆಗುವುದಿಲ್ಲ. ಅದನ್ನು ಪರಿಶೀಲಿಸಿದ ನಂತರ ನೈಜವಾಗಿ ಹಂಚಿಕೆ ಆಗಿರುವವರಿಗೆ ಆದಷ್ಟು ಬೇಗ ಖಾತೆ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.

ಅರ್ಚನ ಎಸ್‌ ಎಸ್

Recent Posts

ದೆಹಲಿ | ಸ್ಲೀಪರ್‌ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…

1 hour ago

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

5 hours ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

18 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

19 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

19 hours ago