ರಾಜ್ಯ

ನನಗೆ ಶಾಸಕರು, ಸಚಿವರ ಬೆಂಬಲ ಬೇಡ ಡಿಕೆಶಿ ಹೇಳಿಕೆ| ಅದು ಅವರ ವೈಯಕ್ತಿಕ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ

ರಾಯಚೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಿನ್ನೆ ನನಗೆ ಶಾಸಕರು, ಸಚಿವರ ಬೆಂಬಲ ಬೇಡ ಎಂಬ ಹೇಳಿಕೆ ನೀಡಿದ್ದು, ಇದೀಗ ಎಂಎಲ್‌ಸಿ ಯತೀಂದ್ರ ಸಿದ್ದರಾಮುಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ರಾಯಚೂರಿನಲ್ಲಿ ಇಂದು(ಜನವರಿ.12) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ತಿಳಿಸಿದ್ದಾರೆ ಅಷ್ಟೇ. ರಾಜ್ಯ ರಾಜಕೀಯದಲ್ಲಿ ಯಾವುದೇ ಬದಲಾವಣೆಗಳು ಆಗುವುದಿಲ್ಲ. ಮುಂದಿನ ದಿನಗಳಲ್ಲಿಯೂ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ನಡೆಯಲಿದೆ.  ಹಾಗಾಗಿ ಈ ಬಗ್ಗೆ ಯಾವುದೇ ರೀತಿಯ ಚರ್ಚೆಗಳನ್ನು ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ವರಿಷ್ಠರು ಮತ್ತು ಶಾಸಕರ ಅಭಿಪ್ರಾಯದಂತೆ ಕಾರ್ಯ ನಿರ್ವಹಿಸಲಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಆಂತರಿಕ ಕಲಹಗಳು ಇಲ್ಲ. ಹೀಗಾಗಿ ಮುಂದಿನ ದಿನಗಳಲ್ಲೂ ಸಹ ಸರ್ಕಾರ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

5 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

6 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago