ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಎರಡು ದಿನಗಳಿಂದ ವರಿಷ್ಠರ ಭೇಟಿಗೆ ತೆರಳಿದ್ದ ಭಿನ್ನಮತೀಯರು ಬಂದ ದಾರಿಗೆ ಸುಂಕ ಇಲ್ಲ ಎನ್ನುವಂತೆ ಇಂದು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ.
ಬಿಜೆಪಿ ಖಾಯಂ ಭಿನ್ನಮತೀಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಬಿ.ಪಿ.ಹರೀಶ್, ಜಿ.ಎಂ.ಸಿದ್ದೇಶ್ವರ, ಎನ್.ಆರ್.ಸಂತೋಷ್ ಸೇರಿದಂತೆ ಮತ್ತಿತರರು ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗಿದ್ದಾರೆ.
ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡುವ ವಿಫಲ ಪ್ರಯತ್ನ ನಡೆಸಿದ್ದಾರೆ. ಇಂದು ಬೆಳಿಗ್ಗೆ ಕರ್ನಾಟಕ ಭವನದಲ್ಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಉಳಿದಂತೆ ಯಾವುದೇ ರಾಷ್ಟ್ರೀಯ ಬಿಜೆಪಿ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಇನ್ನೆರಡು ದಿನದ ನಂತರ ಪುನಃ ದೆಹಲಿಗೆ ಬರುವುದಾಗಿ ಹೇಳಿದ್ದರಾದರೂ ಅದು ಈ ವರೆಗೂ ಖಚಿತವಾಗಿಲ್ಲ.
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…