ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿರುವ ಸಂಬಂಧ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೋಟಿಸ್ಗೆ ಶಾಸಕ ಯತ್ನಾಳ್ ಉತ್ತರ ಕೊಡುತ್ತಾರೆ. ಆನಂತರ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡ್ತಾರಾ ಅಥವಾ ಅವರಿಗೆ ಉನ್ನತ ಸ್ಥಾನ ಕೊಡ್ತಾರಾ ಎಂದು ನೀವೆಲ್ಲಾ ಕಾದುನೋಡಿ ಎಂದರು.
ಇನ್ನು ವಕ್ಫ್ ಹೋರಾಟಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಪಕ್ಷಕ್ಕೆ, ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ಅದನ್ನು ಮೀರಿ ರಾಜ್ಯದ ಜನಪರವಾದ ನ್ಯಾಯುಯುತ ಹೋರಾಟ ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದರು. ಇನ್ನು ವಕ್ಫ್ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರದಲ್ಲಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ. ಇದರ ಪೂರ್ಣ ಸಮೀಕ್ಷೆಗಾಗಿ ಕೇಂದ್ರವು ಜಂಟಿ ಸಂಸದೀಯ ಸಮಿತಿ ರಚನೆ ಮಾಡಿದೆ. ಈ ಸಮಿತಿಗೆ ಅಂತಿಮ ವರದಿ ಸಲ್ಲಿಸಲು ಈ ಬಜೆಟ್ ಅಧಿವೇಶನದವರೆಗೂ ಕಾಲಾವಕಾಶ ನೀಡಲಾಗಿದೆ.
ವಕ್ಫ್ ವಿಚಾರವಾಗಿ ಈ ರೀತಿ ಮಾಡಬೇಡಿ ಎನ್ನುವ ಆಧಾರದಲ್ಲಿ ನೋಟಿಸ್ ನೀಡಿದ್ರೆ, ಅದು ನಮ್ಮ ತಂಡಕ್ಕೆ ನೋಟಿಸ್ ನೀಡಿದ ಹಾಗೆ. ನಾವು ಪಕ್ಷದ ನಿರ್ದೇಶನದಂತೆ ನೋಟಿಸ್ಗೆ ಪ್ರತಿಕ್ರಿಯೆ ನೀಡುತ್ತೇವೆ. ಆದರೆ ಇದು ಯತ್ನಾಳ್ಗೆ ನೀಡಿರುವ ನೋಟಿಸ್ ಅಷ್ಟೆ. ನಮ್ಮ ತಂಡಕ್ಕಲ್ಲ ಎಂದು ಹೇಳಿದರು.
ಈಗ ಯತ್ನಾಳ್ ತಂಡದ ಹೋರಾಟಕ್ಕೆ ರಾಜ್ಯಾದ್ಯಂತ ಜನ ಬೆಂಬಲವಿದೆ. ಯಾಕೆಂದರೆ ನ್ಯಾಯಯುತವಾಗಿ, ರೈತ ಪರವಾಗಿ, ಜನರ ಜಮೀನು ಉಳಿಸುವುದಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಇದು ವಿರೋಧಿ ಬಣಗಳಿಗೆ ಸಹಿಸಲು ಆಗುತ್ತಿಲ್ಲ ಎಂದು ವಿಜಯೇಂದ್ರ ಬಣಕ್ಕೆ ತಿರುಗೇಟು ನೀಡಿದರು.
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…
ರಾಮನಗರ: ಜಿಮ್ ಟ್ರೇನರ್ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…
ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…