ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿರುವ ಸಂಬಂಧ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೋಟಿಸ್ಗೆ ಶಾಸಕ ಯತ್ನಾಳ್ ಉತ್ತರ ಕೊಡುತ್ತಾರೆ. ಆನಂತರ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡ್ತಾರಾ ಅಥವಾ ಅವರಿಗೆ ಉನ್ನತ ಸ್ಥಾನ ಕೊಡ್ತಾರಾ ಎಂದು ನೀವೆಲ್ಲಾ ಕಾದುನೋಡಿ ಎಂದರು.
ಇನ್ನು ವಕ್ಫ್ ಹೋರಾಟಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಪಕ್ಷಕ್ಕೆ, ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ಅದನ್ನು ಮೀರಿ ರಾಜ್ಯದ ಜನಪರವಾದ ನ್ಯಾಯುಯುತ ಹೋರಾಟ ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದರು. ಇನ್ನು ವಕ್ಫ್ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರದಲ್ಲಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ. ಇದರ ಪೂರ್ಣ ಸಮೀಕ್ಷೆಗಾಗಿ ಕೇಂದ್ರವು ಜಂಟಿ ಸಂಸದೀಯ ಸಮಿತಿ ರಚನೆ ಮಾಡಿದೆ. ಈ ಸಮಿತಿಗೆ ಅಂತಿಮ ವರದಿ ಸಲ್ಲಿಸಲು ಈ ಬಜೆಟ್ ಅಧಿವೇಶನದವರೆಗೂ ಕಾಲಾವಕಾಶ ನೀಡಲಾಗಿದೆ.
ವಕ್ಫ್ ವಿಚಾರವಾಗಿ ಈ ರೀತಿ ಮಾಡಬೇಡಿ ಎನ್ನುವ ಆಧಾರದಲ್ಲಿ ನೋಟಿಸ್ ನೀಡಿದ್ರೆ, ಅದು ನಮ್ಮ ತಂಡಕ್ಕೆ ನೋಟಿಸ್ ನೀಡಿದ ಹಾಗೆ. ನಾವು ಪಕ್ಷದ ನಿರ್ದೇಶನದಂತೆ ನೋಟಿಸ್ಗೆ ಪ್ರತಿಕ್ರಿಯೆ ನೀಡುತ್ತೇವೆ. ಆದರೆ ಇದು ಯತ್ನಾಳ್ಗೆ ನೀಡಿರುವ ನೋಟಿಸ್ ಅಷ್ಟೆ. ನಮ್ಮ ತಂಡಕ್ಕಲ್ಲ ಎಂದು ಹೇಳಿದರು.
ಈಗ ಯತ್ನಾಳ್ ತಂಡದ ಹೋರಾಟಕ್ಕೆ ರಾಜ್ಯಾದ್ಯಂತ ಜನ ಬೆಂಬಲವಿದೆ. ಯಾಕೆಂದರೆ ನ್ಯಾಯಯುತವಾಗಿ, ರೈತ ಪರವಾಗಿ, ಜನರ ಜಮೀನು ಉಳಿಸುವುದಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಇದು ವಿರೋಧಿ ಬಣಗಳಿಗೆ ಸಹಿಸಲು ಆಗುತ್ತಿಲ್ಲ ಎಂದು ವಿಜಯೇಂದ್ರ ಬಣಕ್ಕೆ ತಿರುಗೇಟು ನೀಡಿದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…