ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿರುವ ಸಂಬಂಧ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೋಟಿಸ್ಗೆ ಶಾಸಕ ಯತ್ನಾಳ್ ಉತ್ತರ ಕೊಡುತ್ತಾರೆ. ಆನಂತರ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡ್ತಾರಾ ಅಥವಾ ಅವರಿಗೆ ಉನ್ನತ ಸ್ಥಾನ ಕೊಡ್ತಾರಾ ಎಂದು ನೀವೆಲ್ಲಾ ಕಾದುನೋಡಿ ಎಂದರು.
ಇನ್ನು ವಕ್ಫ್ ಹೋರಾಟಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಪಕ್ಷಕ್ಕೆ, ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ಅದನ್ನು ಮೀರಿ ರಾಜ್ಯದ ಜನಪರವಾದ ನ್ಯಾಯುಯುತ ಹೋರಾಟ ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದರು. ಇನ್ನು ವಕ್ಫ್ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರದಲ್ಲಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ. ಇದರ ಪೂರ್ಣ ಸಮೀಕ್ಷೆಗಾಗಿ ಕೇಂದ್ರವು ಜಂಟಿ ಸಂಸದೀಯ ಸಮಿತಿ ರಚನೆ ಮಾಡಿದೆ. ಈ ಸಮಿತಿಗೆ ಅಂತಿಮ ವರದಿ ಸಲ್ಲಿಸಲು ಈ ಬಜೆಟ್ ಅಧಿವೇಶನದವರೆಗೂ ಕಾಲಾವಕಾಶ ನೀಡಲಾಗಿದೆ.
ವಕ್ಫ್ ವಿಚಾರವಾಗಿ ಈ ರೀತಿ ಮಾಡಬೇಡಿ ಎನ್ನುವ ಆಧಾರದಲ್ಲಿ ನೋಟಿಸ್ ನೀಡಿದ್ರೆ, ಅದು ನಮ್ಮ ತಂಡಕ್ಕೆ ನೋಟಿಸ್ ನೀಡಿದ ಹಾಗೆ. ನಾವು ಪಕ್ಷದ ನಿರ್ದೇಶನದಂತೆ ನೋಟಿಸ್ಗೆ ಪ್ರತಿಕ್ರಿಯೆ ನೀಡುತ್ತೇವೆ. ಆದರೆ ಇದು ಯತ್ನಾಳ್ಗೆ ನೀಡಿರುವ ನೋಟಿಸ್ ಅಷ್ಟೆ. ನಮ್ಮ ತಂಡಕ್ಕಲ್ಲ ಎಂದು ಹೇಳಿದರು.
ಈಗ ಯತ್ನಾಳ್ ತಂಡದ ಹೋರಾಟಕ್ಕೆ ರಾಜ್ಯಾದ್ಯಂತ ಜನ ಬೆಂಬಲವಿದೆ. ಯಾಕೆಂದರೆ ನ್ಯಾಯಯುತವಾಗಿ, ರೈತ ಪರವಾಗಿ, ಜನರ ಜಮೀನು ಉಳಿಸುವುದಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಇದು ವಿರೋಧಿ ಬಣಗಳಿಗೆ ಸಹಿಸಲು ಆಗುತ್ತಿಲ್ಲ ಎಂದು ವಿಜಯೇಂದ್ರ ಬಣಕ್ಕೆ ತಿರುಗೇಟು ನೀಡಿದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…