ರಾಜ್ಯ

ವಿನಯ್‌ ಆತ್ಯಹತ್ಯೆ ಪ್ರಕರಣ| ಬಿಜೆಪಿ ನಾಯಕರು ಅಡ್ಜ್‌ಸ್ಟ್‌ಮೆಂಟ್ ಮಾಡಿಕೊಳ್ಳದೇ ಹೋರಾಟ ನಡೆಸಲಿ: ಯತ್ನಾಳ್‌

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸರ್ಕಾರದೊಂದಿಗೆ ಅಡ್ಜ್‌ಸ್ಟೆಮೆಂಟ್‌ ಮಾಡಿಕೊಳ್ಳದೇ ಹೋರಾಟ ನಡೆಸಿ ಆತನ ಸಾವಿಗೆ ನ್ಯಾಯ ದೊರಕಿಸಿಕೊಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸ್‌ನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ ಈಗ ಟ್ವಿಟ್ಟರ್‌ನಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆಡಳಿತಾರೂಢ ಪಕ್ಷದ ಇಬ್ಬರು ಹಾಲಿ ಶಾಸಕರ ಪಾತ್ರವಿದೇ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹಿಂದುತ್ವವಾದಿಗಳನ್ನು ಹಾಗೂ ಬಲಪಂಕ್ತೀಯರನ್ನು ಗುರಿಯಾಗಿಸಿಕೊಂಡು ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅವರ ಕುಟುಂಬವನ್ನು, ಸ್ನೇಹಿತರನ್ನು ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಕುಟಿಲ ರಾಜಕಾರಣವನ್ನು ತೋರಿಸುತ್ತದೆ. ಹಿಂದುತ್ವದ ಪರ ಮಾತನಾಡಿದವರನ್ನು ಮೂಲೆಗುಂಪು ಮಾಡಿ ಅವರನ್ನು ಮಾನಸಿಕವಾಗಿ ಜರ್ಜರಿತರನ್ನಾಗಿ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡುವವರನ್ನು ಸುಮ್ಮನೆ ಬಿಡಬಾರದು ಎಂದು ಕಿಡಿಕಾರಿದ್ದಾರೆ.

ವಿನಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೆಯೇ ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಪೊಲೀಸರು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಲಿ. ಅಲ್ಲದೇ ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

8 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

8 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

8 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

8 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

8 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

9 hours ago