ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿದ ತಪ್ಪುಗಳಿಂದಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿದ್ದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ಇಂದು(ಜನವರಿ.19) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಮನೆಯಲ್ಲಿ ಕಿಚ್ಚಿತ್ತು ಕಿಮ್ಮತ್ತಿಲ್ಲ. ಅವರು ಮೊದಲು ಪುತ್ರ ವ್ಯಾಮೋಹವನ್ನು ಬಿಡಬೇಕು. ಏಕೆಂದರೆ ವಿಜಯೇಂದ್ರ ಅವರು ಹೊರಗಡೆ ಮಾತ್ರ ಪೂಜ್ಯ ತಂದೆ ಎನ್ನುತ್ತಾರೆ. ಆದರೆ ಮನೆಯಲ್ಲಿ ಯಡಿಯೂರಪ್ಪಗೆ ಮುದಿಯಾ ಎಂದು ಕರೆಯುತ್ತಾನೆ. ಯಡಿಯೂರಪ್ಪ ಅವರು ತಮ್ಮ ಸ್ವಾರ್ಥಕ್ಕಾಗಿ ಅನೇಕರನ್ನು ಮಣ್ಣಲ್ಲಿ ಇಟ್ಟಿದ್ದು, ಬಿ.ಬಿ.ಶಿವಪ್ಪ ಮತ್ತು ಮಲ್ಲಿಕಾರ್ಜುನಯ್ಯ ಸೇರಿದಂತೆ ಹಲವರಿಗೆ ಅನ್ಯಾಯ ಮಾಡಿದ್ದಾರೆ. ಈಗಲಾದರೂ ಅವರು ಸುಮ್ಮನೆ ಮೊಮ್ಮಕ್ಕಳ ಜೊತೆ ಆಟ ಆಡುತ್ತಾ ಕೂರಲಿ ಎಂದು ಲೇವಡಿ ಮಾಡಿದರು.
ಇನ್ನೂ ರಮೇಶ್ ಜಾರಕಿಕೊಳಿ ಅವರ ಪರ ನಾನು ಸದಾಕಾಲ ಇರುತ್ತೇನೆ. ಆದರೆ ನಮ್ಮ ವಿರುದ್ಧ ಎರಡು ಹಂದಿಗಳನ್ನು ಹೊರತು ಪಡಿಸಿ ಬೇರೆ ಯಾರೂ ಮಾತನಾಡಲ್ಲ. ಆ ಹಂದಿಗಳ ಹೇಳಿಕೆಗಳಿಗೆಲ್ಲಾ ನಾವು ತಲೆಕೆಡಿಸಿಕೊಳ್ಳಲು ಆಗುವುದಿಲ್ಲ. ಹೊಗಳು ಭಟ್ಟರು ವಿಜಯೇಂದ್ರ ಪರ ಮಾತನಾಡುತ್ತಾರೆ ಎಂದು ಟೀಕಿಸಿದರು.
ವಿಜಯೇಂದ್ರಗೆ ರಾಜ್ಯಾಧ್ಯಕ್ಷನಾಗಲು ಲಾಯಕ್ಕಿಲ್ಲ, ಅವರನ್ನು ನಾವ್ಯಾರು ರಾಜ್ಯಾಧ್ಯಕ್ಷನೆಂದು ಒಪ್ಪುವುದಿಲ್ಲ. ಅವನಿಂದಲೇ ಪಾಪ ಸುನೀಲ್ ಕುಮಾರ್ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ಅನ್ನಿಸುತ್ತದೆ. ಹೀಗಾಗಿ ರಮೇಶ್ ಜಾರಕಿಹೊಳಿ ಮಾತನಾಡಿರುವುದರಲ್ಲಿ ತಪ್ಪೇನಿಲ್ಲ. ಮೊದಲೇ ನಾವು ಉತ್ತರ ಕರ್ನಾಟಕದವರು ಆ ಕಾರಣಕ್ಕೆ ನಾವು ಯಾರಿಗೂ ಹೆದರಲ್ಲ ಎಂದು ಕಿಡಿಕಾರಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…