ರಾಜ್ಯ

ವಿಜಯೇಂದ್ರ ಮಾಡಿದ ತಪ್ಪಿನಿಂದಲೇ ಯಡಿಯೂರಪ್ಪ ಜೈಲಿಗೆ ಹೋಗಿದ್ದು: ಶಾಸಕ ಯತ್ನಾಳ್‌

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿದ ತಪ್ಪುಗಳಿಂದಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಜೈಲಿಗೆ ಹೋಗಿದ್ದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಇಂದು(ಜನವರಿ.19) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಮನೆಯಲ್ಲಿ ಕಿಚ್ಚಿತ್ತು ಕಿಮ್ಮತ್ತಿಲ್ಲ. ಅವರು ಮೊದಲು ಪುತ್ರ ವ್ಯಾಮೋಹವನ್ನು ಬಿಡಬೇಕು. ಏಕೆಂದರೆ ವಿಜಯೇಂದ್ರ ಅವರು ಹೊರಗಡೆ ಮಾತ್ರ ಪೂಜ್ಯ ತಂದೆ ಎನ್ನುತ್ತಾರೆ. ಆದರೆ ಮನೆಯಲ್ಲಿ ಯಡಿಯೂರಪ್ಪಗೆ ಮುದಿಯಾ ಎಂದು ಕರೆಯುತ್ತಾನೆ. ಯಡಿಯೂರಪ್ಪ ಅವರು ತಮ್ಮ ಸ್ವಾರ್ಥಕ್ಕಾಗಿ ಅನೇಕರನ್ನು ಮಣ್ಣಲ್ಲಿ ಇಟ್ಟಿದ್ದು, ಬಿ.ಬಿ.ಶಿವಪ್ಪ ಮತ್ತು ಮಲ್ಲಿಕಾರ್ಜುನಯ್ಯ ಸೇರಿದಂತೆ ಹಲವರಿಗೆ ಅನ್ಯಾಯ ಮಾಡಿದ್ದಾರೆ. ಈಗಲಾದರೂ ಅವರು ಸುಮ್ಮನೆ ಮೊಮ್ಮಕ್ಕಳ ಜೊತೆ ಆಟ ಆಡುತ್ತಾ ಕೂರಲಿ ಎಂದು ಲೇವಡಿ ಮಾಡಿದರು.

ಇನ್ನೂ ರಮೇಶ್‌ ಜಾರಕಿಕೊಳಿ ಅವರ ಪರ ನಾನು ಸದಾಕಾಲ ಇರುತ್ತೇನೆ. ಆದರೆ ನಮ್ಮ ವಿರುದ್ಧ ಎರಡು ಹಂದಿಗಳನ್ನು ಹೊರತು ಪಡಿಸಿ ಬೇರೆ ಯಾರೂ ಮಾತನಾಡಲ್ಲ. ಆ ಹಂದಿಗಳ ಹೇಳಿಕೆಗಳಿಗೆಲ್ಲಾ ನಾವು ತಲೆಕೆಡಿಸಿಕೊಳ್ಳಲು ಆಗುವುದಿಲ್ಲ. ಹೊಗಳು ಭಟ್ಟರು ವಿಜಯೇಂದ್ರ ಪರ ಮಾತನಾಡುತ್ತಾರೆ ಎಂದು ಟೀಕಿಸಿದರು.

ವಿಜಯೇಂದ್ರಗೆ ರಾಜ್ಯಾಧ್ಯಕ್ಷನಾಗಲು ಲಾಯಕ್ಕಿಲ್ಲ, ಅವರನ್ನು ನಾವ್ಯಾರು ರಾಜ್ಯಾಧ್ಯಕ್ಷನೆಂದು ಒಪ್ಪುವುದಿಲ್ಲ. ಅವನಿಂದಲೇ ಪಾಪ ಸುನೀಲ್‌ ಕುಮಾರ್‌ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ಅನ್ನಿಸುತ್ತದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಮಾತನಾಡಿರುವುದರಲ್ಲಿ ತಪ್ಪೇನಿಲ್ಲ. ಮೊದಲೇ ನಾವು ಉತ್ತರ ಕರ್ನಾಟಕದವರು ಆ ಕಾರಣಕ್ಕೆ ನಾವು ಯಾರಿಗೂ ಹೆದರಲ್ಲ ಎಂದು ಕಿಡಿಕಾರಿದರು.

ಅರ್ಚನ ಎಸ್‌ ಎಸ್

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

2 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

3 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

4 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

6 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

6 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

7 hours ago