ರಾಜ್ಯ

ವಿಜಯೇಂದ್ರ ಮಾಡಿದ ತಪ್ಪಿನಿಂದಲೇ ಯಡಿಯೂರಪ್ಪ ಜೈಲಿಗೆ ಹೋಗಿದ್ದು: ಶಾಸಕ ಯತ್ನಾಳ್‌

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿದ ತಪ್ಪುಗಳಿಂದಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಜೈಲಿಗೆ ಹೋಗಿದ್ದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಇಂದು(ಜನವರಿ.19) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಮನೆಯಲ್ಲಿ ಕಿಚ್ಚಿತ್ತು ಕಿಮ್ಮತ್ತಿಲ್ಲ. ಅವರು ಮೊದಲು ಪುತ್ರ ವ್ಯಾಮೋಹವನ್ನು ಬಿಡಬೇಕು. ಏಕೆಂದರೆ ವಿಜಯೇಂದ್ರ ಅವರು ಹೊರಗಡೆ ಮಾತ್ರ ಪೂಜ್ಯ ತಂದೆ ಎನ್ನುತ್ತಾರೆ. ಆದರೆ ಮನೆಯಲ್ಲಿ ಯಡಿಯೂರಪ್ಪಗೆ ಮುದಿಯಾ ಎಂದು ಕರೆಯುತ್ತಾನೆ. ಯಡಿಯೂರಪ್ಪ ಅವರು ತಮ್ಮ ಸ್ವಾರ್ಥಕ್ಕಾಗಿ ಅನೇಕರನ್ನು ಮಣ್ಣಲ್ಲಿ ಇಟ್ಟಿದ್ದು, ಬಿ.ಬಿ.ಶಿವಪ್ಪ ಮತ್ತು ಮಲ್ಲಿಕಾರ್ಜುನಯ್ಯ ಸೇರಿದಂತೆ ಹಲವರಿಗೆ ಅನ್ಯಾಯ ಮಾಡಿದ್ದಾರೆ. ಈಗಲಾದರೂ ಅವರು ಸುಮ್ಮನೆ ಮೊಮ್ಮಕ್ಕಳ ಜೊತೆ ಆಟ ಆಡುತ್ತಾ ಕೂರಲಿ ಎಂದು ಲೇವಡಿ ಮಾಡಿದರು.

ಇನ್ನೂ ರಮೇಶ್‌ ಜಾರಕಿಕೊಳಿ ಅವರ ಪರ ನಾನು ಸದಾಕಾಲ ಇರುತ್ತೇನೆ. ಆದರೆ ನಮ್ಮ ವಿರುದ್ಧ ಎರಡು ಹಂದಿಗಳನ್ನು ಹೊರತು ಪಡಿಸಿ ಬೇರೆ ಯಾರೂ ಮಾತನಾಡಲ್ಲ. ಆ ಹಂದಿಗಳ ಹೇಳಿಕೆಗಳಿಗೆಲ್ಲಾ ನಾವು ತಲೆಕೆಡಿಸಿಕೊಳ್ಳಲು ಆಗುವುದಿಲ್ಲ. ಹೊಗಳು ಭಟ್ಟರು ವಿಜಯೇಂದ್ರ ಪರ ಮಾತನಾಡುತ್ತಾರೆ ಎಂದು ಟೀಕಿಸಿದರು.

ವಿಜಯೇಂದ್ರಗೆ ರಾಜ್ಯಾಧ್ಯಕ್ಷನಾಗಲು ಲಾಯಕ್ಕಿಲ್ಲ, ಅವರನ್ನು ನಾವ್ಯಾರು ರಾಜ್ಯಾಧ್ಯಕ್ಷನೆಂದು ಒಪ್ಪುವುದಿಲ್ಲ. ಅವನಿಂದಲೇ ಪಾಪ ಸುನೀಲ್‌ ಕುಮಾರ್‌ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ಅನ್ನಿಸುತ್ತದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಮಾತನಾಡಿರುವುದರಲ್ಲಿ ತಪ್ಪೇನಿಲ್ಲ. ಮೊದಲೇ ನಾವು ಉತ್ತರ ಕರ್ನಾಟಕದವರು ಆ ಕಾರಣಕ್ಕೆ ನಾವು ಯಾರಿಗೂ ಹೆದರಲ್ಲ ಎಂದು ಕಿಡಿಕಾರಿದರು.

ಅರ್ಚನ ಎಸ್‌ ಎಸ್

Recent Posts

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

1 hour ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

3 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

9 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

9 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

9 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

9 hours ago