ರಾಜ್ಯ

ಬಿವೈ ವಿಜಯೇಂದ್ರ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ್‌

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಮಗೆ ಬೇಕಾದ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಕೆಜೆಪಿ-೨ ರಚನೆ ಮಾಡಿದ್ದಾರೆ ಎಂದು ಯತ್ನಾಳ್‌ ಕಿಡಿಕಾರಿದ್ದಾರೆ.

ಈ ಹಿಂದೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಕೆಜೆಪಿ ಭಾಗ-೧ ಪಕ್ಷ ಕಟ್ಟಿದ್ದರು, ಇದೀಗ ಅವರ ಮಗ ಬಿವೈ ವಿಜಯೇಂದ್ರ ಕೆಜೆಪಿ ಭಾಗ-೨ ರನ್ನು ಕಟ್ಟಿದ್ದು, ಇದರ ಆಯುಷ್ಯ ಕೇವಲ ಲೋಕಸಭಾ ಚುನಾವಣೆ ಮುಗಿಯುವ ವರೆಗೆ ಮಾತ್ರ ಎಂದಿದ್ದಾರೆ.

ಲೋಕ ಸಭಾ ಚುನಾವಣೆಯಲ್ಲಿ ಎಲ್ಲಾ ೨೮ ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ. ಒಂದೇ ಒಂದಯ ಸ್ಥಾನ ಕಡಿಮೆಯಾದರು ಅವರ ಸ್ಥಾನ ತೆರವು ನಿಶ್ಚಿತ ಎಂದರು.

ರಾಜಕೀಯದಲ್ಲಿ ಸದ್ಯ ಕಳ್ಳರು, ಲಫಂಗರು ಹೆಚ್ಚಾಗಿದ್ದಾರೆ, ಮೌಲ್ಯಾಧಾರಿತ ರಾಜಕಾರಣ ಇಲ್ಲವಾಗಿದೆ. ಪಕ್ಷ ವರಿಷ್ಠರು ಕೀಲಿಯನ್ನು ಕಳ್ಳರ ಕೈಗೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ೨೮ ಸ್ಥಾನ ಬರದೇ ಹೋದರೆ ಕೀಲಿಯನ್ನು ಕಸಿದುಕೊಳ್ಳುತ್ತಾರೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಮೇಜರ್‌ ಸರ್ಜರಿ ಆಗದಿದ್ದರೆ, ಮುಂದಿನ ಕ್ರಮ ನಾನು ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.

andolanait

Recent Posts

ನೀರಿನ ‘ತಾಪ’ತ್ರಯ ಹನೂರು ಮೊದಲು!

ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ  ಚಾಮರಾಜನಗರ: ಬಿಸಿಲ ತಾಪ…

2 mins ago

‘ಇದು ನನ್ನ ಜಮೀನು, ನಾನಿನ್ನೂ ಬದುಕಿದ್ದೇನೆ’

ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…

9 mins ago

‘ಒಳಚರಂಡಿ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ’: ಶಾಸಕ ಜಿಟಿಡಿ ಸೂಚನೆ

ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…

15 mins ago

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

9 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

9 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

9 hours ago