ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಮಗೆ ಬೇಕಾದ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಕೆಜೆಪಿ-೨ ರಚನೆ ಮಾಡಿದ್ದಾರೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.
ಈ ಹಿಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೆಜೆಪಿ ಭಾಗ-೧ ಪಕ್ಷ ಕಟ್ಟಿದ್ದರು, ಇದೀಗ ಅವರ ಮಗ ಬಿವೈ ವಿಜಯೇಂದ್ರ ಕೆಜೆಪಿ ಭಾಗ-೨ ರನ್ನು ಕಟ್ಟಿದ್ದು, ಇದರ ಆಯುಷ್ಯ ಕೇವಲ ಲೋಕಸಭಾ ಚುನಾವಣೆ ಮುಗಿಯುವ ವರೆಗೆ ಮಾತ್ರ ಎಂದಿದ್ದಾರೆ.
ಲೋಕ ಸಭಾ ಚುನಾವಣೆಯಲ್ಲಿ ಎಲ್ಲಾ ೨೮ ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ. ಒಂದೇ ಒಂದಯ ಸ್ಥಾನ ಕಡಿಮೆಯಾದರು ಅವರ ಸ್ಥಾನ ತೆರವು ನಿಶ್ಚಿತ ಎಂದರು.
ರಾಜಕೀಯದಲ್ಲಿ ಸದ್ಯ ಕಳ್ಳರು, ಲಫಂಗರು ಹೆಚ್ಚಾಗಿದ್ದಾರೆ, ಮೌಲ್ಯಾಧಾರಿತ ರಾಜಕಾರಣ ಇಲ್ಲವಾಗಿದೆ. ಪಕ್ಷ ವರಿಷ್ಠರು ಕೀಲಿಯನ್ನು ಕಳ್ಳರ ಕೈಗೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ೨೮ ಸ್ಥಾನ ಬರದೇ ಹೋದರೆ ಕೀಲಿಯನ್ನು ಕಸಿದುಕೊಳ್ಳುತ್ತಾರೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಆಗದಿದ್ದರೆ, ಮುಂದಿನ ಕ್ರಮ ನಾನು ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…