ಕೋಲಾರ: ಯತ್ನಾಳ್ ಒಬ್ಬರೇ ಹಿಂದುತ್ವದ ನಾಯಕರಲ್ಲ. ಶತಮಾನಗಳಿಂದ ಹಿಂದುತ್ವದ ನಾಯಕರು ಹಾದು ಹೋಗಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್.ಮುನಿಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ಪಕ್ಷದ ಲಿಮಿಟ್ ಮೀರಿ ನಡೆದುಕೊಂಡಿದ್ದಾರೆ. ಆದ ಕಾರಣ ಅವರನ್ನು ಅಮಾನತು ಮಾಡಲಾಗಿದೆ. ಅವರ ವಯಸ್ಸಿಗೆ ಗೌರವ ಕೊಡುತ್ತೇವೆ ಅದನ್ನು ಉಳಿಸಿಕೊಳ್ಳಲಿ. ಎಲ್ಲದಕ್ಕೂ ಒಂದು ತಾಳ್ಮೆ ಇರುತ್ತದೆ ಎಂದು ತಿರುಗೇಟು ನೀಡಿದರು.
ಯತ್ನಾಳ್ ಅವರು ಬಿಜೆಪಿ ನಾಯಕರ ವಿರುದ್ಧ ತಿರುಗಿ ಬೀಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ದಿನಕ್ಕೊಂದು ಅಸ್ತ್ರ ನೀಡುತ್ತಿದ್ದಾರೆ. ಬೇಕಾದರೆ ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ಮಾತನಾಡಲಿ ಆಗ ಮೆಚ್ಚುತ್ತೇವೆ. ಯತ್ನಾಳ್ ಒಬ್ಬರೇ ಹಿಂದುತ್ವದ ನಾಯಕರಲ್ಲ ನಮ್ಮನ್ನೂ ಹಿಂದೂ ಫೈರ್ಬ್ರ್ಯಾಂಡ್ ಎಂದು ಕರೆಯುತ್ತಾರೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…