ಬೆಂಗಳೂರು: ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡಿದ ಸಂಬಂಧ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ನೋಟಿಸ್ಗೆ ಬಿಜೆಪಿ ಶಾಸಕ ಬಸನಗೌಡ್ ಪಾಟೀಲ್ ಯತ್ನಾಳ್ ಉತ್ತರ ನೀಡಿದ್ದಾರೆ.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಯತ್ನಾಳ್ ಅವರಿಗೆ ಸಮಿತಿ ಇದೇ 10ರಂದು ನೋಟಿಸ್ ನೀಡಿ 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತ್ತು. ಇದಕ್ಕೆ 5 ಪುಟಗಳಷ್ಟು ವಿವರವಾದ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾನು ಯಾವುದೇ ಬಣ ರಾಜಕಾರಣ ಮಾಡಿಲ್ಲ. ಪಕ್ಷದ ಚೌಕಟ್ಟಿನಲ್ಲೇ ವಕ್ಫ್ ಹೋರಾಟ ನಡೆಸಿದ್ದೇವೆ. ಪಕ್ಷಕ್ಕೆ ಧಕ್ಕೆಯಾಗುವಂತಹ ಕೆಲಸವನ್ನು ಮಾಡಿಲ್ಲ ಎಂದು ಉತ್ತರಿಸಿದ್ದಾರೆ.
ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ಹಿರಿಯರನ್ನು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿಲ್ಲ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುವುದಕ್ಕೆ ಹಲವಾರು ಅವಕಾಶಗಳು ದೊರಕಿದ್ದವು. ಆದರೆ, ರಾಜ್ಯಾಧ್ಯಕ್ಷರ ಅಸಮರ್ಥ ನಾಯಕತತ್ವದಿಂದ ಈ ಎಲ್ಲ ಹೋರಾಟಗಳಲ್ಲಿ ಪಕ್ಷ ವಿಫಲವಾಗಿದೆ ಎಂದು ದೂರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷ ಬಲಪಡಿಸಲು ಈಗಲೇ ಅಧ್ಯಕ್ಷರನ್ನು ಬದಲಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುವವರಿಗೆ ಆ ಹೊಣೆಗಾರಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…