Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸರ್ಕಾರ ಬೀಳಿಸುವ ಬಗ್ಗೆ ಯತ್ನಾಳ್‌ ಹೇಳಿಕೆ: ಡಿಸಿಎಂ ಡಿಕೆಶಿ ಹೇಳಿದ್ದಿಷ್ಟು

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೀಳಿಸಲು 1200 ಕೋಟಿ ರೂ ಮೀಸಲಿಟ್ಟಿದ್ದಾರೆ ಎಂಬ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದಿಂದ ತನಿಖೆಯಾಗಬೇಕು ಎಂದು ಡಿಸಿಎಂ ಡಿಕೆಶಿ ಆಗ್ರಹಿಸಿದ್ದಾರೆ.

ಬಿಜೆಪಿ ಕಡೆಯಿಂದ ಈ ಹಣ ರೆಡಿಯಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್‌ ಹೈಕಮಾಂಡ್‌ಗೂ ಈ ಬಗ್ಗೆ ಮಾಹಿತಿ ರವಾನಿಸಿದ್ದೇನೆ. ಇದು ತೆರಿಗೆ ಇಲಾಖೆಗೆ ಬರುವ ವಿಚಾರ. ಹಾಗಾಗಿ ಇದನ್ನು ಗಂಭೀರವಾಗಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

Tags: