ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಾವು ಮುಂಗೂಸಿಯಂತಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾರೆ.
ನವದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಶುಕ್ರವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಕಚೇರಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಸಂಸದರಾದ ಪಿ.ಸಿ.ಮೋಹನ್, ಗದ್ದಿಗೌಡರ್, ಮಾಜಿ ಸಂಸದ ಬಿ.ವಿ.ನಾಯಕ್ ಸೇರಿದಂತೆ ಅನೇಕರು ಭೇಟಿಯಾಗಿದ್ದರು.
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಮೇಲೆ ಯತ್ನಾಳ್ ಮತ್ತು ಬಿ.ವೈ.ವಿಜಯೇಂದ್ರ ಮುಖಾಮುಖಿಯಾಗಿರುವುದು ಇದೇ ಮೊದಲು.
ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕಡುವಿರೋಧಿಯಾಗಿರುವ ಯತ್ನಾಳ್ ವಿಜಯೇಂದ್ರ ಆಯ್ಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಒಂದು ಹಂತದಲ್ಲಿ ಯತ್ನಾಳ್ ಅವರನ್ನು ವಿಜಯೇಂದ್ರ ಭೇಟಿ ಮಾಡಲು ಯತ್ನಿಸಿದಾಗ ನನ್ನ ಮನೆಗೆ ಅವರು ಬರುವ ಅಗತ್ಯವಿಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ್ದರು.
ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇಬ್ಬರ ನಡುವೆ ಸಂಧಾನ ನಡೆಸಿದ್ದು, ಮೊದಲ ಬಾರಿಗೆ ಮುಖಾಮುಖಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯತ್ನಾಳ್ ಜೊತೆಗೆ ವಿಜಯೇಂದ್ರ ಅಧ್ಯಕ್ಷರಾದ ನಂತರ ಮುನಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ ಕೂಡ ಸಭೆಯಲ್ಲಿ ಇದ್ದದು ವಿಶೇಷ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…