ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಾವು ಮುಂಗೂಸಿಯಂತಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾರೆ.
ನವದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಶುಕ್ರವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಕಚೇರಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಸಂಸದರಾದ ಪಿ.ಸಿ.ಮೋಹನ್, ಗದ್ದಿಗೌಡರ್, ಮಾಜಿ ಸಂಸದ ಬಿ.ವಿ.ನಾಯಕ್ ಸೇರಿದಂತೆ ಅನೇಕರು ಭೇಟಿಯಾಗಿದ್ದರು.
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಮೇಲೆ ಯತ್ನಾಳ್ ಮತ್ತು ಬಿ.ವೈ.ವಿಜಯೇಂದ್ರ ಮುಖಾಮುಖಿಯಾಗಿರುವುದು ಇದೇ ಮೊದಲು.
ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕಡುವಿರೋಧಿಯಾಗಿರುವ ಯತ್ನಾಳ್ ವಿಜಯೇಂದ್ರ ಆಯ್ಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಒಂದು ಹಂತದಲ್ಲಿ ಯತ್ನಾಳ್ ಅವರನ್ನು ವಿಜಯೇಂದ್ರ ಭೇಟಿ ಮಾಡಲು ಯತ್ನಿಸಿದಾಗ ನನ್ನ ಮನೆಗೆ ಅವರು ಬರುವ ಅಗತ್ಯವಿಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ್ದರು.
ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇಬ್ಬರ ನಡುವೆ ಸಂಧಾನ ನಡೆಸಿದ್ದು, ಮೊದಲ ಬಾರಿಗೆ ಮುಖಾಮುಖಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯತ್ನಾಳ್ ಜೊತೆಗೆ ವಿಜಯೇಂದ್ರ ಅಧ್ಯಕ್ಷರಾದ ನಂತರ ಮುನಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ ಕೂಡ ಸಭೆಯಲ್ಲಿ ಇದ್ದದು ವಿಶೇಷ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…