ರಾಜ್ಯ

ಸಾರ್ವಜನಿಕ ಜಾಗದಲ್ಲಿ ನಮಾಜ್‌ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ್‌

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌.ಎಸ್.ಎಸ್)ದ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ, ಸರ್ಕಾರಿ ಸ್ಥಳಗಳಲ್ಲಿ, ಸರ್ಕಾರಿ, ಅನುದಾನಿತ ಶಾಲೆಗಳ ಆವರಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ಹೇಳಿದೆ.

ಇದರ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು​ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಸರ್ಕಾರದ ಅನುಮತಿಯಿಲ್ಲದೆ, ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಯಾವುದೇ ಅನುಮತಿಯಿಲ್ಲದೆ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಮಾಡುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ. ಇಂತಹ ಚಟುವಟಿಕೆಗಳಿಂದ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ಇದು ಭಾರತೀಯ ಸಂವಿಧಾನದ ಕಲಂ 19 ಮತ್ತು 21ರ ಅಡಿಯಲ್ಲಿ ಖಾತರಿಯಾದ ಮುಕ್ತ ಸಂಚಾರ ಹಾಗೂ ಭದ್ರತೆ ಎಂಬ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಹೀಗಾಗಿ ಸರ್ಕಾರಿ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್‌ ಮಾಡಲು ಅನುಮತಿ ನೀಡಬಾರದು ಎಂದು ಯತ್ನಾಳ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಪೂರ್ವ ಅನುಮತಿಯಿಲ್ಲದೆ ರಸ್ತೆಯಲ್ಲಿ, ಪಾದಚಾರಿ ಮಾರ್ಗಗಳಲ್ಲಿ ಅಥವಾ ಸರ್ಕಾರಿ ಆವರಣದಲ್ಲಿ ನಮಾಜ್ ಮಾಡದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಯತ್ನಾಳ್ ಮನವಿ ಮಾಡಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಾವಳಿಗಳ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳನ್ನು ಧಾರ್ಮಿಕ ಉದ್ದೇಶಗಳಿಗೆ ಅನಧಿಕೃತವಾಗಿ ಬಳಸುವುದನ್ನು ತಡೆಗಟ್ಟಲು ಸ್ಪಷ್ಟವಾದ SOPಯನ್ನು ಸರ್ಕಾರ ರೂಪಿಸಬೇಕು. ಆ ಮೂಲಕ ಧರ್ಮನಿರಪೇಕ್ಷತೆ, ಕಾನೂನಿನ ಸಮಾನತೆ ಮತ್ತು ಸಾರ್ವಜನಿಕ ಶಿಸ್ತಿನ ಬಗ್ಗೆ ತನ್ನ ಬದ್ಧತೆಯನ್ನು ದೃಢಪಡಿಸಬೇಕು ಎಂದು ಯತ್ನಾಳ್​ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

6 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

8 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

10 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

11 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

14 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

14 hours ago