ರಾಜ್ಯ

ಸಾರ್ವಜನಿಕ ಜಾಗದಲ್ಲಿ ನಮಾಜ್‌ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ್‌

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌.ಎಸ್.ಎಸ್)ದ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ, ಸರ್ಕಾರಿ ಸ್ಥಳಗಳಲ್ಲಿ, ಸರ್ಕಾರಿ, ಅನುದಾನಿತ ಶಾಲೆಗಳ ಆವರಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ಹೇಳಿದೆ.

ಇದರ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು​ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಸರ್ಕಾರದ ಅನುಮತಿಯಿಲ್ಲದೆ, ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಯಾವುದೇ ಅನುಮತಿಯಿಲ್ಲದೆ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಮಾಡುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ. ಇಂತಹ ಚಟುವಟಿಕೆಗಳಿಂದ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ಇದು ಭಾರತೀಯ ಸಂವಿಧಾನದ ಕಲಂ 19 ಮತ್ತು 21ರ ಅಡಿಯಲ್ಲಿ ಖಾತರಿಯಾದ ಮುಕ್ತ ಸಂಚಾರ ಹಾಗೂ ಭದ್ರತೆ ಎಂಬ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಹೀಗಾಗಿ ಸರ್ಕಾರಿ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್‌ ಮಾಡಲು ಅನುಮತಿ ನೀಡಬಾರದು ಎಂದು ಯತ್ನಾಳ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಪೂರ್ವ ಅನುಮತಿಯಿಲ್ಲದೆ ರಸ್ತೆಯಲ್ಲಿ, ಪಾದಚಾರಿ ಮಾರ್ಗಗಳಲ್ಲಿ ಅಥವಾ ಸರ್ಕಾರಿ ಆವರಣದಲ್ಲಿ ನಮಾಜ್ ಮಾಡದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಯತ್ನಾಳ್ ಮನವಿ ಮಾಡಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಾವಳಿಗಳ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳನ್ನು ಧಾರ್ಮಿಕ ಉದ್ದೇಶಗಳಿಗೆ ಅನಧಿಕೃತವಾಗಿ ಬಳಸುವುದನ್ನು ತಡೆಗಟ್ಟಲು ಸ್ಪಷ್ಟವಾದ SOPಯನ್ನು ಸರ್ಕಾರ ರೂಪಿಸಬೇಕು. ಆ ಮೂಲಕ ಧರ್ಮನಿರಪೇಕ್ಷತೆ, ಕಾನೂನಿನ ಸಮಾನತೆ ಮತ್ತು ಸಾರ್ವಜನಿಕ ಶಿಸ್ತಿನ ಬಗ್ಗೆ ತನ್ನ ಬದ್ಧತೆಯನ್ನು ದೃಢಪಡಿಸಬೇಕು ಎಂದು ಯತ್ನಾಳ್​ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago