ರಾಜ್ಯ

ಭಾರತ್ ಅಕ್ಕಿ ಯೋಜನೆಗೆ ಯಡಿಯೂರಪ್ಪ ಚಾಲನೆ !

ಬೆಂಗಳೂರು: ಅಕ್ಕಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಮಾಡಿದೆ. ಇದರ ನಡುವೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ರೂ.29ಕ್ಕೆ ಒಂದು ಕೆಜಿ ಅಕ್ಕಿ ವಿತರಣೆಗೆ ಮುಂದಾಗಿದೆ. ಇದರ ಸಲುವಾಗಿ ಇಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಅಕ್ಕಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದರು. ಹೀಗಾಗಿ ರಾಜ್ಯದ ಜನತೆಗೆ ಸಿಹಿಸುದ್ದಿ ಎನ್ನುವಂತೆ ಭಾರತ್ ಬ್ರಾಂಡ್ ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ ಒಂದು ಕೆಜಿಗೆ ರೂ.29ರಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.

ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ ಬಳಿಕ, ಪ್ರಾಥಮಿಕವಾಗಿ ಮಂಗಳವಾರ ಬೆಂಗಳೂರಿನಲ್ಲಿ ಮಾತ್ರ ಸಿಗಲಿದ್ದು, ನಗರದ ವಿವಿಧೆಡೆ ಭಾರತ್ ಅಕ್ಕಿ ವಾಹನಗಳು ಸಂಚರಿಸಿ ಅಕ್ಕಿ ಮಾರಲಿವೆ. ಬುಧವಾರದಿಂದ ಮಂಡ್ಯದಲ್ಲಿ ಹಾಗೂ ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲಿ ಗ್ರಾಹಕರಿಗೆ ಲಭ್ಯವಾಗೋ ಸಾಧ್ಯತೆ ಇದೆ.

ಬಿಗ್ ಬಾಸ್ಕೆಟ್, ಪ್ಲಿಪ್‌ಕಾರ್ಟ್, ರಿಲೈಯನ್ಸ್ ಸ್ಟೋರ್ಸ್, ಸ್ಟಾರ್ ಹೈಪರ್ ಬಝಾರ್‌ಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳವಾರ ಸಂಜೆಯಿಂದ ರಿಲೈಯನ್ಸ್ ಸ್ಟೋರ್ಸ್‌ಗಳಲ್ಲಿ ಈ ಅಕ್ಕಿ ಸಿಗಲಿದೆ.

ಇನ್ನೊಂದು ವಾರದ ಬಳಿಕ ಇತರೆ ಸ್ಟೋರ್ಸ್‌ಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದು. ಭಾರತ್ ಅಕ್ಕಿ ಜೊತೆಗೆ, ಈಗಾಗಲೇ ವಾಹನಗಳಲ್ಲಿ ಕೇಜಿಗೆ ರೂ.27.50 ನಂತೆ ಮಾರುತ್ತಿರುವ ಗೋಧಿ ಹಿಟ್ಟು, ಕೇಜಿಗೆ ರೂ 60 ನಂತೆ ಕಡ್ಲೆ ಬೇಳೆ ಕೂಡ ಸ್ಟೋರ್ಸ್‌ಗಳಲ್ಲಿ ಪಡೆಯಬಹುದಾಗಿದೆ.

andolanait

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

7 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

7 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

13 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

15 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

16 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

16 hours ago