ರಾಜ್ಯ

ಭಾರತ್ ಅಕ್ಕಿ ಯೋಜನೆಗೆ ಯಡಿಯೂರಪ್ಪ ಚಾಲನೆ !

ಬೆಂಗಳೂರು: ಅಕ್ಕಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಮಾಡಿದೆ. ಇದರ ನಡುವೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ರೂ.29ಕ್ಕೆ ಒಂದು ಕೆಜಿ ಅಕ್ಕಿ ವಿತರಣೆಗೆ ಮುಂದಾಗಿದೆ. ಇದರ ಸಲುವಾಗಿ ಇಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಅಕ್ಕಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದರು. ಹೀಗಾಗಿ ರಾಜ್ಯದ ಜನತೆಗೆ ಸಿಹಿಸುದ್ದಿ ಎನ್ನುವಂತೆ ಭಾರತ್ ಬ್ರಾಂಡ್ ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ ಒಂದು ಕೆಜಿಗೆ ರೂ.29ರಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.

ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ ಬಳಿಕ, ಪ್ರಾಥಮಿಕವಾಗಿ ಮಂಗಳವಾರ ಬೆಂಗಳೂರಿನಲ್ಲಿ ಮಾತ್ರ ಸಿಗಲಿದ್ದು, ನಗರದ ವಿವಿಧೆಡೆ ಭಾರತ್ ಅಕ್ಕಿ ವಾಹನಗಳು ಸಂಚರಿಸಿ ಅಕ್ಕಿ ಮಾರಲಿವೆ. ಬುಧವಾರದಿಂದ ಮಂಡ್ಯದಲ್ಲಿ ಹಾಗೂ ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲಿ ಗ್ರಾಹಕರಿಗೆ ಲಭ್ಯವಾಗೋ ಸಾಧ್ಯತೆ ಇದೆ.

ಬಿಗ್ ಬಾಸ್ಕೆಟ್, ಪ್ಲಿಪ್‌ಕಾರ್ಟ್, ರಿಲೈಯನ್ಸ್ ಸ್ಟೋರ್ಸ್, ಸ್ಟಾರ್ ಹೈಪರ್ ಬಝಾರ್‌ಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳವಾರ ಸಂಜೆಯಿಂದ ರಿಲೈಯನ್ಸ್ ಸ್ಟೋರ್ಸ್‌ಗಳಲ್ಲಿ ಈ ಅಕ್ಕಿ ಸಿಗಲಿದೆ.

ಇನ್ನೊಂದು ವಾರದ ಬಳಿಕ ಇತರೆ ಸ್ಟೋರ್ಸ್‌ಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದು. ಭಾರತ್ ಅಕ್ಕಿ ಜೊತೆಗೆ, ಈಗಾಗಲೇ ವಾಹನಗಳಲ್ಲಿ ಕೇಜಿಗೆ ರೂ.27.50 ನಂತೆ ಮಾರುತ್ತಿರುವ ಗೋಧಿ ಹಿಟ್ಟು, ಕೇಜಿಗೆ ರೂ 60 ನಂತೆ ಕಡ್ಲೆ ಬೇಳೆ ಕೂಡ ಸ್ಟೋರ್ಸ್‌ಗಳಲ್ಲಿ ಪಡೆಯಬಹುದಾಗಿದೆ.

andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

1 hour ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

7 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

7 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

8 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

8 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

13 hours ago