ಬೆಂಗಳೂರು: ಅಕ್ಕಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಮಾಡಿದೆ. ಇದರ ನಡುವೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ರೂ.29ಕ್ಕೆ ಒಂದು ಕೆಜಿ ಅಕ್ಕಿ ವಿತರಣೆಗೆ ಮುಂದಾಗಿದೆ. ಇದರ ಸಲುವಾಗಿ ಇಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಅಕ್ಕಿ ಯೋಜನೆಗೆ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದರು. ಹೀಗಾಗಿ ರಾಜ್ಯದ ಜನತೆಗೆ ಸಿಹಿಸುದ್ದಿ ಎನ್ನುವಂತೆ ಭಾರತ್ ಬ್ರಾಂಡ್ ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ ಒಂದು ಕೆಜಿಗೆ ರೂ.29ರಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.
ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ ಬಳಿಕ, ಪ್ರಾಥಮಿಕವಾಗಿ ಮಂಗಳವಾರ ಬೆಂಗಳೂರಿನಲ್ಲಿ ಮಾತ್ರ ಸಿಗಲಿದ್ದು, ನಗರದ ವಿವಿಧೆಡೆ ಭಾರತ್ ಅಕ್ಕಿ ವಾಹನಗಳು ಸಂಚರಿಸಿ ಅಕ್ಕಿ ಮಾರಲಿವೆ. ಬುಧವಾರದಿಂದ ಮಂಡ್ಯದಲ್ಲಿ ಹಾಗೂ ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲಿ ಗ್ರಾಹಕರಿಗೆ ಲಭ್ಯವಾಗೋ ಸಾಧ್ಯತೆ ಇದೆ.
ಬಿಗ್ ಬಾಸ್ಕೆಟ್, ಪ್ಲಿಪ್ಕಾರ್ಟ್, ರಿಲೈಯನ್ಸ್ ಸ್ಟೋರ್ಸ್, ಸ್ಟಾರ್ ಹೈಪರ್ ಬಝಾರ್ಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳವಾರ ಸಂಜೆಯಿಂದ ರಿಲೈಯನ್ಸ್ ಸ್ಟೋರ್ಸ್ಗಳಲ್ಲಿ ಈ ಅಕ್ಕಿ ಸಿಗಲಿದೆ.
ಇನ್ನೊಂದು ವಾರದ ಬಳಿಕ ಇತರೆ ಸ್ಟೋರ್ಸ್ಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದು. ಭಾರತ್ ಅಕ್ಕಿ ಜೊತೆಗೆ, ಈಗಾಗಲೇ ವಾಹನಗಳಲ್ಲಿ ಕೇಜಿಗೆ ರೂ.27.50 ನಂತೆ ಮಾರುತ್ತಿರುವ ಗೋಧಿ ಹಿಟ್ಟು, ಕೇಜಿಗೆ ರೂ 60 ನಂತೆ ಕಡ್ಲೆ ಬೇಳೆ ಕೂಡ ಸ್ಟೋರ್ಸ್ಗಳಲ್ಲಿ ಪಡೆಯಬಹುದಾಗಿದೆ.
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…