ರಾಜ್ಯ

ಕಮಲ್‌ ಹಾಸನ್‌ ಕನ್ನಡಿಗರ ಕ್ಷಮೆ ಕೇಳಲೇಬೇಕು: ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

ಬೆಂಗಳೂರು: ನಟ ಕಮಲ್‌ ಹಾಸನ್‌ ಗೌರವಯುತವಾಗಿ ಕನ್ನಡಿಗರ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಇದು ಕನ್ನಡಿಗರ ಘೋಷ ವಾಕ್ಯ ಮಾತ್ರವಲ್ಲ. ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ಧ ಮಾಡಿ ತೋರಿಸಿದ್ದಾರೆ. ಇತಿಹಾಸ, ಭಾಷಾಶಾಸ್ತ್ರ, ತಜ್ಞರಲ್ಲದ ಕಲಾವಿದ ಕಮಲ್‌ ಹಾಸನ್‌ ಕನ್ನಡ ಭಾಷೆಯ ಬಗ್ಗೆ ಸಂವೇದನಾರಹಿತವಾಗಿ ಮಾತನಾಡಿರುವುದು ಅತ್ಯಂತ ಖಂಡನಾರ್ಹ.

ಇದನ್ನೂ ಓದಿ:- ನಟ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ಹಿಗ್ಗಾಮುಗ್ಗಾ ತರಾಟೆ

ಅನಗತ್ಯವಾಗಿ ಶಾಂತಿ, ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವನ್ನುಂಟು ಮಾಡುವ ಅವರ ವರ್ತನೆ ಸರಿಯಲ್ಲ. ಅವರ ಅಭಿಪ್ರಾಯ ಮಂಡನೆಯ ಭರದಲ್ಲಿ ಕೋಟ್ಯಾಂತರ ಕನ್ನಡಿಗರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು, ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ. ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago