kamal hasan
ಬೆಂಗಳೂರು: ನಟ ಕಮಲ್ ಹಾಸನ್ ಗೌರವಯುತವಾಗಿ ಕನ್ನಡಿಗರ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಇದು ಕನ್ನಡಿಗರ ಘೋಷ ವಾಕ್ಯ ಮಾತ್ರವಲ್ಲ. ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ಧ ಮಾಡಿ ತೋರಿಸಿದ್ದಾರೆ. ಇತಿಹಾಸ, ಭಾಷಾಶಾಸ್ತ್ರ, ತಜ್ಞರಲ್ಲದ ಕಲಾವಿದ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಸಂವೇದನಾರಹಿತವಾಗಿ ಮಾತನಾಡಿರುವುದು ಅತ್ಯಂತ ಖಂಡನಾರ್ಹ.
ಇದನ್ನೂ ಓದಿ:- ನಟ ಕಮಲ್ ಹಾಸನ್ಗೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ
ಅನಗತ್ಯವಾಗಿ ಶಾಂತಿ, ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವನ್ನುಂಟು ಮಾಡುವ ಅವರ ವರ್ತನೆ ಸರಿಯಲ್ಲ. ಅವರ ಅಭಿಪ್ರಾಯ ಮಂಡನೆಯ ಭರದಲ್ಲಿ ಕೋಟ್ಯಾಂತರ ಕನ್ನಡಿಗರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು, ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ. ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…