ರಾಜ್ಯ

ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗಾಭ್ಯಾಸ ಸಹಕಾರಿ: ಇಒ ಮಮತಾ. ಎಲ್

ಮಳವಳ್ಳಿ : ದೇಶದ ಅನೇಕ ಋಷಿ ಮುನಿಗಳು ಹಾಗೂ ಸಾಧಕರಿಂಧ ಸಿದ್ಧಿಸಿದ ಯೋಗಭ್ಯಾಸವು  ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಕೊಡುಗೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಮತಾ ಹೇಳಿದರು.

ತಳಗವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿದ ಕ್ಯಾತಮ್ಮನಕಟ್ಟೆ ಅಮೃತ ಸರೋವರ ಕೆರೆ ದಡದಲ್ಲಿ 10ನೇ ವಿಶ್ವ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿಶ್ವ ಸಂಸ್ಥೆ ಸೇರಿ ವಿಶ್ವದ ಅನೇಕ ದೇಶಗಳು ಇಂದು ಯೋಗ ದಿನ ಆಚರಿಸುತ್ತಿವೆ. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗಾಭ್ಯಾಸ ಸಹಕಾರಿಯಾಗಿದೆ. ಕೂಲಿಕಾರರು ದಿನಪೂರ್ತಿ ಕುಟುಂಬ ನಿರ್ವಹಣೆ, ಹೊರಗಡೆ ದುಡಿಮೆ ಹಾಗೂ ಮಕ್ಕಳ ಲಾಲನೆ ಪಾಲನೆಯಲ್ಲಿ ನಿರತರಾಗಿರುವ ಮಹಿಳೆಯರು ಸದಾ ಒತ್ತಡದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ನಾವು ದಿನ ಪೂರ್ತಿ ದುಡಿಯುತ್ತೇವೆ ನಮಗೇಕೆ ಯೋಗ ಎಂದು ಉದಾಸೀನ ಮಾಡದೇ ಪ್ರತಿ ದಿನ ಬೆಳಗ್ಗೆ ಅಥವಾ ಸಂಜೆ ಒಂದರ್ಧ ಗಂಟೆ ಯೋಗಭ್ಯಾಸಕ್ಕೆ ಮೀಸಲಿಟ್ಟರೆ, ದೈಹಿಕ ಸದೃಢತೆ ಜೊತೆಗೆ ನೆಮ್ಮದಿ ಕಂಡುಕೊಳ್ಳಬಹುದಾಗಿದೆ ಎಂದರು.

ಪ್ರಸ್ತುತ ಬದಲಾದ ಆಹಾರ ಶೈಲಿ, ಜೀವನ ಕ್ರಮದಿಂದ ಇಂದು ಅನೇಕ ರೋಗಗಳು ಕಾಣಿಸಿಕೊಳ್ಳುತ್ತಿವೆ ಅದ್ದರಿಂದ ಮುಂಜಾಗ್ರತೆ ವಹಿಸುವುದು ತುಂಬಾ ಅವಶ್ಯವಾಗಿದೆ‌. ದುಶ್ಚಟಗಳನ್ನು ತ್ಯಜಿಸಿ, ಉತ್ತಮ ಆಹಾರ, ಗಾಳಿ ಸೇವಿಸುದರ ಮೂಲಕ ಆರೋಗ್ಯ ಕ್ಷಮತೆ ಸಾಧಿಸಬಹುದು. ಗ್ರಾಮೀಣರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯೋಗ ದಿನಾಚರಣೆ ಏರ್ಪಡಿಸಿರುವುದು ಶ್ಲಾಘನೀಯ ‌ಕಾರ್ಯ ಎಂದರು.

ಈ ಸಂದರ್ಭದಲ್ಲಿ ಪಿಡಿಒ ರೇಣುಕಾ, ಯೋಗ ಶಿಕ್ಷಕರಾದ ಚಂದ್ರಶೇಖರ ಎಂ.ಬಿ, ಶಾಲಾ ಶಿಕ್ಷಕರು, ತಾಲ್ಲೂಕು ಐಇಸಿ ಸಂಯೋಜಕರಾ ಸುನಿಲ್ ಕುಮಾರ್. ಹೆಚ್, ತಾಂತ್ರಿಕ ಸಹಾಯಕರಾದ ನಿತಿನ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಶಾಲಾ ಮಕ್ಕಳು, ಕೂಲಿಕಾರರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

5 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

5 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

6 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

6 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

6 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

7 hours ago