ರಾಜ್ಯ

ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗಾಭ್ಯಾಸ ಸಹಕಾರಿ: ಇಒ ಮಮತಾ. ಎಲ್

ಮಳವಳ್ಳಿ : ದೇಶದ ಅನೇಕ ಋಷಿ ಮುನಿಗಳು ಹಾಗೂ ಸಾಧಕರಿಂಧ ಸಿದ್ಧಿಸಿದ ಯೋಗಭ್ಯಾಸವು  ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಕೊಡುಗೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಮತಾ ಹೇಳಿದರು.

ತಳಗವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿದ ಕ್ಯಾತಮ್ಮನಕಟ್ಟೆ ಅಮೃತ ಸರೋವರ ಕೆರೆ ದಡದಲ್ಲಿ 10ನೇ ವಿಶ್ವ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿಶ್ವ ಸಂಸ್ಥೆ ಸೇರಿ ವಿಶ್ವದ ಅನೇಕ ದೇಶಗಳು ಇಂದು ಯೋಗ ದಿನ ಆಚರಿಸುತ್ತಿವೆ. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗಾಭ್ಯಾಸ ಸಹಕಾರಿಯಾಗಿದೆ. ಕೂಲಿಕಾರರು ದಿನಪೂರ್ತಿ ಕುಟುಂಬ ನಿರ್ವಹಣೆ, ಹೊರಗಡೆ ದುಡಿಮೆ ಹಾಗೂ ಮಕ್ಕಳ ಲಾಲನೆ ಪಾಲನೆಯಲ್ಲಿ ನಿರತರಾಗಿರುವ ಮಹಿಳೆಯರು ಸದಾ ಒತ್ತಡದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ನಾವು ದಿನ ಪೂರ್ತಿ ದುಡಿಯುತ್ತೇವೆ ನಮಗೇಕೆ ಯೋಗ ಎಂದು ಉದಾಸೀನ ಮಾಡದೇ ಪ್ರತಿ ದಿನ ಬೆಳಗ್ಗೆ ಅಥವಾ ಸಂಜೆ ಒಂದರ್ಧ ಗಂಟೆ ಯೋಗಭ್ಯಾಸಕ್ಕೆ ಮೀಸಲಿಟ್ಟರೆ, ದೈಹಿಕ ಸದೃಢತೆ ಜೊತೆಗೆ ನೆಮ್ಮದಿ ಕಂಡುಕೊಳ್ಳಬಹುದಾಗಿದೆ ಎಂದರು.

ಪ್ರಸ್ತುತ ಬದಲಾದ ಆಹಾರ ಶೈಲಿ, ಜೀವನ ಕ್ರಮದಿಂದ ಇಂದು ಅನೇಕ ರೋಗಗಳು ಕಾಣಿಸಿಕೊಳ್ಳುತ್ತಿವೆ ಅದ್ದರಿಂದ ಮುಂಜಾಗ್ರತೆ ವಹಿಸುವುದು ತುಂಬಾ ಅವಶ್ಯವಾಗಿದೆ‌. ದುಶ್ಚಟಗಳನ್ನು ತ್ಯಜಿಸಿ, ಉತ್ತಮ ಆಹಾರ, ಗಾಳಿ ಸೇವಿಸುದರ ಮೂಲಕ ಆರೋಗ್ಯ ಕ್ಷಮತೆ ಸಾಧಿಸಬಹುದು. ಗ್ರಾಮೀಣರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯೋಗ ದಿನಾಚರಣೆ ಏರ್ಪಡಿಸಿರುವುದು ಶ್ಲಾಘನೀಯ ‌ಕಾರ್ಯ ಎಂದರು.

ಈ ಸಂದರ್ಭದಲ್ಲಿ ಪಿಡಿಒ ರೇಣುಕಾ, ಯೋಗ ಶಿಕ್ಷಕರಾದ ಚಂದ್ರಶೇಖರ ಎಂ.ಬಿ, ಶಾಲಾ ಶಿಕ್ಷಕರು, ತಾಲ್ಲೂಕು ಐಇಸಿ ಸಂಯೋಜಕರಾ ಸುನಿಲ್ ಕುಮಾರ್. ಹೆಚ್, ತಾಂತ್ರಿಕ ಸಹಾಯಕರಾದ ನಿತಿನ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಶಾಲಾ ಮಕ್ಕಳು, ಕೂಲಿಕಾರರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

11 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

11 hours ago