ರಾಜ್ಯ

ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು: ಸಿ.ಎಂ ಸಿದ್ದರಾಮಯ್ಯ ಕರೆ

ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ‌

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ

ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಯೋಗೀಶ್ವರ್ ಪರ ರೋಡ್ ಶೋ ನಲ್ಲಿ‌ ಭಾಗವಹಿಸಿ ಚನ್ನಪಟ್ಟಣ ಜನತೆಗೆ ಕರೆ ನೀಡಿದರು.

ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಜನಕಲ್ಯಾಣದ ಸರ್ಕಾರದಲ್ಲಿ ಯೋಗೀಶ್ವರ್ ಇರ್ತಾರೆ

ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೀಶ್ವರ್ ಅವರು ಇರಬೇಕು. ಹೆಚ್.ಡಿ.ಕುಮಾರಸ್ವಾಮಿಯವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೀಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

55 mins ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

1 hour ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

1 hour ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

1 hour ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

2 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

3 hours ago