ರಾಜ್ಯ

ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು: ಸಿ.ಎಂ ಸಿದ್ದರಾಮಯ್ಯ ಕರೆ

ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ‌

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ

ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಯೋಗೀಶ್ವರ್ ಪರ ರೋಡ್ ಶೋ ನಲ್ಲಿ‌ ಭಾಗವಹಿಸಿ ಚನ್ನಪಟ್ಟಣ ಜನತೆಗೆ ಕರೆ ನೀಡಿದರು.

ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಜನಕಲ್ಯಾಣದ ಸರ್ಕಾರದಲ್ಲಿ ಯೋಗೀಶ್ವರ್ ಇರ್ತಾರೆ

ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೀಶ್ವರ್ ಅವರು ಇರಬೇಕು. ಹೆಚ್.ಡಿ.ಕುಮಾರಸ್ವಾಮಿಯವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೀಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago