ಹಾವೇರಿ: ಬಿಜೆಪಿಯ ಮಾಜಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಅವರನ್ನು ಬಿಜೆಪಿ ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಅನೇಕ ಪ್ರಯತ್ನ ಮಾಡಿದ್ದೊ. ಆದರೆ, ಇದೀಗ ಅವರು ನಮ್ಮ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿರುವುದು ಅತಿ ದೊಡ್ಡ ದುರಂತ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಉಪ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಯಾರೂ ಅಭ್ಯರ್ಥಿ ಇರಲಿಲ್ಲ. ಆ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಸುಲಭವಾಗಿ ಗೆಲ್ಲಬಹುದು. ಈಗಲೂ ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಭಾವ ಇದೆ ಎಂದರು.
ಈ ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಮೂರು ಪಕ್ಷಗಳು ಸ್ಪರ್ಧಿಸಿದ್ದಾಗ ಕುಮಾರಸ್ವಾಮಿ ಅವರು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಈ ಉಪ ಚುನಾವಣೆಯಲ್ಲಿಯೂ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…