ರಾಜ್ಯ

ನೀನು ಯಾವುದೋ ಪ್ರಕರಣಗಳಿಗೆ ಸಿಲುಕಿ ಎಲ್ಲೆಲ್ಲೋ ಓಡಾಡುತ್ತಿದ್ದೀಯ: ಮುನಿರತ್ನ ಕಾಲೆಳೆದ ಡಿಕೆಶಿ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತು ಪ್ರಸ್ತಾಪ ಮಾಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾಲೆಳೆದ ಪ್ರಸಂಗ ವಿಧಾನಸಭೆಯಲ್ಲಿ ಜರುಗಿತು.

ಗ್ರೇಟರ್ ಬೆಂಗಳೂರು ವಿಧೇಯಕ ರಚನೆಯ ಬಗ್ಗೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಉತ್ತರ ನೀಡುತ್ತಿದ್ದ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಶಾಸಕರಿಗೆ ಬೇಡ ಎಂದರೆ ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಾಪಸ್ ಪಡೆಯಲು ನಾನು ಸಿದ್ಧನಿದ್ದೇನೆ. ಈ ಬಗ್ಗೆ ಸುದೀರ್ಘ ಚರ್ಚೆಯಾಗಲಿ, ಎಲ್ಲರಿಗೂ ಮಾತನಾಡಲು ಅವಕಾಶ ನೀಡಲಾಗುವುದು. ನಾವೇ ಬೆಳೆಸಿದ ಶಾಸಕ ಮುನಿರತ್ನ ಅವರಿಗೂ ಅವಕಾಶ ನೀಡುತ್ತೇವೆ ಎಂದರು.

ಈ ಹಂತದಲ್ಲಿ ಎದ್ದು ನಿಂತ ಮುನಿರತ್ನ ನನ್ನನ್ನು ಮರೆತು ಹೋಗಿದ್ದೀರಾ ಎಂದುಕೊಂಡಿದ್ದೆ. ನೆನಪಿಸಿಕೊಂಡಿದ್ದಕ್ಕೆ ಧನ್ಯವಾದಗಳು ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನೀನು ಯಾವುದೋ ಪ್ರಕರಣಗಳಿಗೆ ಸಿಲುಕಿ ಎಲ್ಲೆಲ್ಲೋ ಓಡಾಡುತ್ತಿದ್ದೀಯ. ಹಾಗಾಗಿ ಮರೆತು ಹೋಗಿದ್ದೆ ಎಂದು ಕಾಲೆಳೆದರು. ಈ ಸಂದರ್ಭದಲ್ಲಿ ಮುನಿರತ್ನ ನನ್ನ ಮೇಲಿನ ಪ್ರಕರಣಗಳು ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣಗಳನ್ನು ಸೇರಿಸಿ ಸಿಬಿಐ ತನಿಖೆಯಾಗಲಿ ಅಥವಾ ಅದಕ್ಕಿಂತಲೂ ದೊಡ್ಡ ಮಟ್ಟದ ತನಿಖೆ ಇದ್ದರೆ ಅದನ್ನು ಮಾಡಿ ಎಂದು ತಿರುಗೇಟು ನೀಡಿದರು. ಇದು ಕೆಲಕಾಲ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

13 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

13 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

13 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

13 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago