ಬೆಳಗಾವಿ: ವಿಜಯೇಂದ್ರ ನೀನು ಇನ್ನು ಬಚ್ಚಾ, ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗೋಕಾಕ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಜಗಳವಿರುವುದು ಅಧ್ಯಕ್ಷ ಸ್ಥಾನ ಬದಲಾವಣೆಗೆ ಮಾತ್ರ. ಅಧ್ಯಕ್ಷ ಸ್ಥಾನ ಬದಲಾವಣೆ ಆಗದಿದ್ದರು ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.
ಯಡಿಯೂರಪ್ಪ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಮೇಲೆ ನಮಗೆ ಈಗಲೂ ಗೌರವವಿದೆ. ಅವರ ಹೆಸರಿನಲ್ಲಿ ನೀನು ಸುಳ್ಳು ಹೇಳುವುದನ್ನು ಮೊದಲು ಬಿಡು. ನಿನ್ನ ಮೇಲೆ ನನಗೆ ಗೌರವವಿಲ್ಲ, ಅಧ್ಯಕ್ಷ ಸ್ಥಾನದ ಮೇಲೆ ಮಾತ್ರ ಗೌರವ ಎಂದು ಹೇಳಿದರು.
ನಿನ್ನನ್ನು ರಾಜ್ಯದಲ್ಲಿ ಓಡಾಡದ ಹಾಗೆ ನಿಯಂತ್ರಿಸುವ ಶಕ್ತಿ ನಮಗಿದೆ. ಆದರೆ ನಿನ್ನ ಹಾಗೆ ಕೀಳು ಮಟ್ಟದ ರಾಜಕೀಯಕ್ಕೆ ಇಳಿಯುವುದಿಲ್ಲ. ಪಕ್ಷಕ್ಕೆ ಬಂದು ಮೂರು ವರ್ಷ ಆಯಿತು ಎಂದು ಹೇಳುತ್ತಿಯಾ. ನಿಮ್ಮ ಅಪ್ಪನ ಹರಾಮಿ ದುಡ್ಡಲ್ಲಿ ಒಡಾಡ್ತಿದ್ದೀಯಾ ಎಂದು ವಾಗ್ದಾಳಿ ನಡೆಸಿದರು.
ಬಸನಗೌಡ ಪಾಟೀಲ್ ಯತ್ನಾಳ್ ಬಹುಸಂಖ್ಯಾತ ಜನರಿಗೆ ಬೇಕಾಗಿರುವ ವ್ಯಕ್ತಿ ಆದ ಕಾರಣ ನಾವು ಅವರನ್ನು ಒಪ್ಪಿಕೊಂಡಿದ್ದೇವೆ. ಲಿಂಗಾಯಿತರಲ್ಲಿ ಇನ್ನು ಸಾಕಷ್ಟು ಹಿರಿಯ ನಾಯಕರಿದ್ದಾರೆ. ನೀನು ಇನ್ನು ಸಣ್ಣ ಹುಡುಗ ನಿನು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ. ಆಗಲೂ ಹೈಕಮಾಂಡ್ ಮುಂದುವರೆಸಿದರೆ ಪಕ್ಷದ ನಿರ್ಣಯವನ್ನು ನಾನು ಸ್ವಾಗತ ಮಾಡುತ್ತೇನೆ ಏಂದು ಹೇಳಿದರು.
ನನ್ನಿಂದ ಏನಾದರೂ ತಪ್ಪಾಗಿದ್ದರೆ ನನ್ನ ಕ್ಷೇತ್ರದ ಜನರಲ್ಲಿ ಕ್ಷಮೆ ಕೇಳುತ್ತೇನೆ. 2028 ಕ್ಕೆ ಬಿಜೆಪಿ ಪಕ್ಷ ಅಧಿಕಾರ ತರುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…