ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಮ್ಮಿದ ವಿಚಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು.
ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಮ್ಮಿದರು. ಆಗ ಬಿಜೆಪಿ ಶಾಸಕ ಸುನೀಲ್ಕುಮಾರ್, ನಿಮ್ಮ ಆರೈಕೆ ನೋಡಿಕೊಳ್ಳಿ ಎಂದು ಚರ್ಚೆಗೆ ನಾಂದಿ ಹಾಡಿದರು.
ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾನು ಹಾರಿಕೆ ಉತ್ತರ ಕೊಡುವುದಿಲ್ಲ. ಸಮರ್ಪಕ ಉತ್ತರ ಕೊಡುತ್ತೇನೆ ಎಂದರು. ಆಗ ಸ್ಪಷ್ಟನೆ ನೀಡಿದ ಸುನೀಲ್ಕುಮಾರ್, ನಾನು ಹಾಗೇ ಹೇಳಿಲ್ಲ. ನಿಮ್ಮ. ಆರೈಕೆ ನೋಡಿಕೊಳ್ಳಿ ಎಂದು ಸ್ಪಷ್ಟಪಡಿಸಿದರು.
ನೀವು ಕೆಮ್ಮಿದರೆ ಯಾರ್ಯಾರಿಗೆ ಏನೇನು ಆಗುತ್ತದೋ ಎಂದು ಛೇಡಿಸಿದರು. ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ಯು.ಟಿ.ಖಾದರ್ ಅವರು, ಉಪಮುಖ್ಯಮಂತ್ರಿಗಳ ಆರೋಗ್ಯದ ಬಗ್ಗೆ ಮಾತ್ರ ನಿಮಗೆ ಕಾಳಜಿಯೇ? ಬೇರೆಯವರ ಆರೈಕೆಯ ಬಗ್ಗೆ ಕಾಳಜಿ ಇಲ್ಲವೇ ಎಂದು ಹೇಳಿ, ಉತ್ತರ ಮುಂದುವರಿಸಲು ಸೂಚಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…