ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಮ್ಮಿದ ವಿಚಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು.
ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಮ್ಮಿದರು. ಆಗ ಬಿಜೆಪಿ ಶಾಸಕ ಸುನೀಲ್ಕುಮಾರ್, ನಿಮ್ಮ ಆರೈಕೆ ನೋಡಿಕೊಳ್ಳಿ ಎಂದು ಚರ್ಚೆಗೆ ನಾಂದಿ ಹಾಡಿದರು.
ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾನು ಹಾರಿಕೆ ಉತ್ತರ ಕೊಡುವುದಿಲ್ಲ. ಸಮರ್ಪಕ ಉತ್ತರ ಕೊಡುತ್ತೇನೆ ಎಂದರು. ಆಗ ಸ್ಪಷ್ಟನೆ ನೀಡಿದ ಸುನೀಲ್ಕುಮಾರ್, ನಾನು ಹಾಗೇ ಹೇಳಿಲ್ಲ. ನಿಮ್ಮ. ಆರೈಕೆ ನೋಡಿಕೊಳ್ಳಿ ಎಂದು ಸ್ಪಷ್ಟಪಡಿಸಿದರು.
ನೀವು ಕೆಮ್ಮಿದರೆ ಯಾರ್ಯಾರಿಗೆ ಏನೇನು ಆಗುತ್ತದೋ ಎಂದು ಛೇಡಿಸಿದರು. ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ಯು.ಟಿ.ಖಾದರ್ ಅವರು, ಉಪಮುಖ್ಯಮಂತ್ರಿಗಳ ಆರೋಗ್ಯದ ಬಗ್ಗೆ ಮಾತ್ರ ನಿಮಗೆ ಕಾಳಜಿಯೇ? ಬೇರೆಯವರ ಆರೈಕೆಯ ಬಗ್ಗೆ ಕಾಳಜಿ ಇಲ್ಲವೇ ಎಂದು ಹೇಳಿ, ಉತ್ತರ ಮುಂದುವರಿಸಲು ಸೂಚಿಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…